Sunday, August 2, 2026
Sunday, August 2, 2026

CM Siddaramaiah ಆನ್ ಲೈನ್ ಸಭೆ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಂದ ಡೀಸಿ ಮತ್ತು ಸಿಇಓ ಗಳಿಗೆ ಖಡಕ್ ಸೂಚನೆ

Date:

CM Siddaramaiah ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ, ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ
ಸೂಚಿಸಿದರು.

ಜಿಲ್ಲಾಧಿಕಾರಿಗಳು, ಸಿಈಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು ಕಾರಣ ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಹೇಳಿದರು.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.
ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು.
CM Siddaramaiah ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆನ್ ಲೈನ್ ಮೂಲಕ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಖಡಕ್ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...