Monday, February 2, 2026
Monday, February 2, 2026

ಸುವರ್ಣ ಪ್ರತಿಭೆ. ಗೀತಿಕಾ & ಸುಂದರ್.

Date:

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಇತ್ತೀಚೆಗೆ ನಡೆಯಿತು.

ಈ ಘಟಿಕೋತ್ಸವದಲ್ಲಿ ಕೇರಳದ ಗೀತಿಕಾ ಟಿ.ವಿ ಹಾಗೂ ಬಿಹಾರದ ವಿದ್ಯಾರ್ಥಿ ಕೇಸರಿ ಸುಂದರ ವರ್ಮಾ ಚಿನ್ನದ ಪದಕ ಹಾಗೂ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.

ಮಾನ್ಯ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪದಕ, ಪ್ರಮಾಣ ಪತ್ರ ಪ್ರದಾನ ಮಾಡಿದರು.

ಗೀತಿಕಾ ಎಂಬ ವಿದ್ಯಾರ್ಥಿನಿ ಆಟೋ ಚಾಲಕ ಕೆ. ಸುರೇಶ್ ಕುಮಾರ್ ಅವರ ಪುತ್ರಿಯಾಗಿದ್ದಾರೆ. ಈಕೆಗೆ ಕೃಷಿ ಕಾಲೇಜಿನಲ್ಲಿ ಪ್ರಾಧ್ಯಾಪಕಿ ಆಗುವ ಕನಸಿದೆ. ಗೀತಿಕಾಗೆ ಚಿನ್ನದ ಪದಕ ಬಂದಿರುವುದು ಖುಷಿಯಾಗಿದೆ. ಶಿಕ್ಷಕರ ಸಲಹೆಯಂತೆ ಕೃಷಿ ಪದವಿ ಪೂರ್ಣಗೊಳಿಸಿದ್ದೇನೆ. ಕೇರಳದ ಕೃಷಿ ವಿವಿಯಲ್ಲಿ ಸಸ್ಯರೋಗ ಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪ್ರವೇಶ ಪಡೆದಿದ್ದೇನೆ ಎಂದು ಗೀತಿಕಾ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಬಿಹಾರದ ವಿದ್ಯಾರ್ಥಿ ಕೇಸರಿ ಸುಂದರ್ ವರ್ಮಾ. ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕ ಪಡೆದಿದ್ದಾರೆ.ಅವರಿಗೆ 5 ಚಿನ್ನದ ಪದಕ ಮತ್ತು 2 ನಗದು ಬಹುಮಾನ ಲಭಿಸಿದೆ.

ನಳಂದ ಜಿಲ್ಲೆಯ ರಾಜಗೀರ್ ಗ್ರಾಮದಿಂದ ವ್ಯಾಸಂಗಕ್ಕಾಗಿ ರಾಯಚೂರಿಗೆ ಬಂದಿದ್ದಾರೆ. ಅವರಿಗೆ ಕೃಷಿ ವಿಜ್ಞಾನಿಯಾಗುವ ಕನಸಿದೆ.

ಖರಗ ಪುರ ಐಐಟಿಯಲ್ಲಿ ಎಂ. ಟೆಕ್ ಪ್ರವೇಶ ಪಡೆದಿದ್ದಾರೆ. ತಂದೆ ವಿಮಾ ಏಜೆಂಟ್ ಹಾಗೂ ತಾಯಿ ಕಾಲೇಜು ಉಪನ್ಯಾಸಕಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...