Thursday, March 19, 2026
Thursday, March 19, 2026

Death News ಕಾಣೆಯಾದ ವ್ಯಕ್ತಿನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

Date:

Death News ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62)
ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ. ಬಳಿಕ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು.

ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಸಾವಿಗೆ ನಿಖರವಾದ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

Death News ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...