Thursday, December 18, 2025
Thursday, December 18, 2025

Alone Protest ಮೈಮೆಲೆ ಗಂಜಲ ಹುಯ್ದುಕೊಂಡು ಗ್ರಾಮ ಪಂಚಾಯತ್ ಅಧ್ಯಕ್ಷರ ಖಡಕ್ ಪ್ರತಿಭಟನೆ

Date:

Alone Protest ಹೊಸನಗರ ತಾಲೂಕಿನ ಗ್ರಾಮೀಣ ಪ್ರದೇಶದ ಅನೇಕ ಕಡೆ ಕಳೆದ ಒಂದೂವರೆ ತಿಂಗಳಿನಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ, ಸರ್ಕಾರದಿಂದ ಇದಕ್ಕಾಗಿ ಯಾವುದೇ ಹಣ ಬಿಡುಗಡೆಯಾಗಿಲ್ಲ. ಅಧಿಕಾರಿಗಳಿಗೆ ಜನ ಪರ ಕಾಳಜಿ ಇಲ್ಲ ಎಂದು ಹೊಸನಗರದ ಮೂಡುಗೊಪ್ಪ ಗ್ರಾ. ಪಂ. ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ತಾ. ಪಂ. ಕಚೇರಿ ಎದುರು ಗೋಮೂತ್ರ, ಸಗಣಿ ನೀರು ಮೈಮೇಲೆ ಸುರಿದುಕೊಂಡು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ತಾವು ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಗಮನ ಸೆಳೆದಿದ್ದೇನೆ. ಕಳೆದ ಒಂದುವರೆ ತಿಂಗಳಿನಿಂದ ನೀರಿಲ್ಲದೆ ಹಾಹಾಕಾರ ಉಂಟಾಗಿದೆ. ಜನರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಇಲಾಖೆ ಸೂಚನೆ ಮೇರೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಇದಕ್ಕೆ ಅಗತ್ಯ ಅನುದಾನ ಗ್ರಾಮ ಪಂಚಾಯಿತಿಯಲ್ಲಿಲ್ಲ. ವಿಶೇಷ ಅನುದಾನ ಬಿಡುಗಡೆ ಮಾಡಬೇಕಾಗಿರುವ ಅಧಿಕಾರಿಗಳು ಇನ್ನಿಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.

Alone Protest ಬರಗಾಲದ ಛಾಯೆ ಕಾಣಿಸಿಕೊಂಡಿದೆ. ಟಾಸ್ಕ್ ಫೋರ್ಸ್ ಮೀಟಿಂಗ್ನಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದರೆ ಪ್ರತೀ ತಾಲೂಕಿಗೆ 15 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಪಿಡಿಒಗಳಿಗೆ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ಮಾತು ತಪ್ಪಿದ್ದಾರೆ. ಜನಸಾಮಾನ್ಯರಿಂದ ಬೈಸಿಕೊಂಡು ಬೇಸರವಾಗಿದೆ. ಮೊದಲು ನಾವು ಶುದ್ಧ ಆಗಬೇಕಾದ ಪರಿಸ್ಥಿತಿ ಬಂದಿದೆ. ಆದ್ದರಿಂದ, ಗೋಮೂತ್ರ, ಸಗಣಿ ನೀರು ಮೈಮೇಲೆ ಹಾಕಿಕೊಂಡು ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...