Tuesday, March 31, 2026
Tuesday, March 31, 2026

Lohit Kumar was Elected as Chikkadevanur Village President ಚಿಕ್ಕದೇವನೂರು ಗ್ರಾಪಂ ಅಧ್ಯಕ್ಷರಾಗಿ ಲೋಹಿತ್ ಕುಮಾರ್ ಆಯ್ಕೆ

Date:

Lohit Kumar was Elected as Chikkadevanur Village President ಚಿಕ್ಕಮಗಳೂರು, ತಾಲ್ಲೂಕಿನ ಚಿಕ್ಕದೇವನೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಂ.ಲೋಹಿತ್‌ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಗ್ರಾ.ಪಂ. ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಎಂ.ಲೋಹಿತ್‌ಕುಮಾರ್ ಅವರನ್ನು ಚುನಾವಣಾಧಿಕಾರಿ ವಿಜಯ್‌ಕುಮಾರ್ ಅಧಿಕೃತವಾಗಿ ಘೋಷಿಸಿದರು.

ಈ ವೇಳೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಶಾಸಕ ಹೆಚ್.ಡಿ.ತಮ್ಯಯ್ಯ ಚಿಕ್ಕದೇವನೂರು ಗ್ರಾಮ ಪಂಚಾ ಯಿತಿ ಅನೇಕ ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಅದೇ ರೀತಿಯಲ್ಲಿ ಮುಂದಿನ ಜಿ.ಪಂ., ತಾ.ಪಂ. ಹಾಗೂ ಲೋಕಸಭಾ ಚುನಾವಣೆಯಲ್ಲಿ ಗ್ರಾಮ ಸೇರಿದಂತೆ ಜಿಲ್ಲೆಯನ್ನು ಪೂರ್ಣವಾಗಿ ಕಾಂಗ್ರೆಸ್ ಭದ್ರಕೋಟೆ ಯನ್ನಾಗಿ ಮಾಡಲು ಮುಂದಾಗಬೇಕು ಎಂದರು.

ಕಳೆದ ಹಲವಾರು ವರ್ಷಗಳಿಂದ ಈ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಯಾವುದೇ ಶಾಶ್ವತ ಅಭಿವೃದ್ದಿ ಕಾಮಗಾರಿಗಳಾಗಿಲ್ಲ.

ಇದೀಗ ಕ್ಷೇತ್ರ, ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಎದ್ದಿದೆ. ಆ ನಿಟ್ಟಿನಲ್ಲಿ ಮುಂದಿನ ತಮ್ಮ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಫಾಕ್ಟರಿ ತೆರೆಯುವ ಮೂಲಕ ಉದ್ಯೋಗ ಕಲ್ಪಿಸಿಕೊಡುವ ಭರವಸೆ ವ್ಯಕ್ತಪಡಿಸಿದರು.

ಇದೀಗ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರುಗಳಿಗೆ ಆನೆ ಬಲಬಂದಂತಾಗಿದೆ. ಮುಂದಿನ ಯಾವುದೇ ಸಮಸ್ಯೆಗಳು ಕ್ಷೇತ್ರದಲ್ಲಿ ಎದುರಾದಲ್ಲಿ ನ್ಯಾಯಸಮ್ಮತವಾಗಿ ಬಗೆಹರಿಸುವ ಮೂಲಕ ಕ್ಷೇತ್ರದ ಜನತೆ ಜೊತೆ ಉತ್ತಮ ನಂಟನ್ನು ಹೊಂದುವುದಾಗಿ ಹೇಳಿದರು.

Lohit Kumar was Elected as Chikkadevanur Village President ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಈ.ಕೆ.ವಸಂತ, ಸದಸ್ಯರುಗಳಾದ ಸಿ.ಎಸ್.ಅಶೋಕ್, ಸಿ.ಎಸ್.ಚಂದ್ರ ಶೇಖರ್, ಸುಲೋಚನಾ, ಟಿ.ಆರ್.ರಂಗಮ್ಮ, ಎಂ.ಸಿ.ಶೋಭಾ, ಕೆ.ಸಿ.ಗಂಗಾಧರ್, ಸರಸ್ವತಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶ್ರೀಮತಿ ಬಿ.ಎಂ.ಶಾರದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...