Thursday, February 5, 2026
Thursday, February 5, 2026

Lohit Kumar was Elected as Chikkadevanur Village President ಚಿಕ್ಕದೇವನೂರು ಗ್ರಾಪಂ ಅಧ್ಯಕ್ಷರಾಗಿ ಲೋಹಿತ್ ಕುಮಾರ್ ಆಯ್ಕೆ

Date:

Lohit Kumar was Elected as Chikkadevanur Village President ಚಿಕ್ಕಮಗಳೂರು, ತಾಲ್ಲೂಕಿನ ಚಿಕ್ಕದೇವನೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಂ.ಲೋಹಿತ್‌ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಗ್ರಾ.ಪಂ. ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಎಂ.ಲೋಹಿತ್‌ಕುಮಾರ್ ಅವರನ್ನು ಚುನಾವಣಾಧಿಕಾರಿ ವಿಜಯ್‌ಕುಮಾರ್ ಅಧಿಕೃತವಾಗಿ ಘೋಷಿಸಿದರು.

ಈ ವೇಳೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಶಾಸಕ ಹೆಚ್.ಡಿ.ತಮ್ಯಯ್ಯ ಚಿಕ್ಕದೇವನೂರು ಗ್ರಾಮ ಪಂಚಾ ಯಿತಿ ಅನೇಕ ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಅದೇ ರೀತಿಯಲ್ಲಿ ಮುಂದಿನ ಜಿ.ಪಂ., ತಾ.ಪಂ. ಹಾಗೂ ಲೋಕಸಭಾ ಚುನಾವಣೆಯಲ್ಲಿ ಗ್ರಾಮ ಸೇರಿದಂತೆ ಜಿಲ್ಲೆಯನ್ನು ಪೂರ್ಣವಾಗಿ ಕಾಂಗ್ರೆಸ್ ಭದ್ರಕೋಟೆ ಯನ್ನಾಗಿ ಮಾಡಲು ಮುಂದಾಗಬೇಕು ಎಂದರು.

ಕಳೆದ ಹಲವಾರು ವರ್ಷಗಳಿಂದ ಈ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಯಾವುದೇ ಶಾಶ್ವತ ಅಭಿವೃದ್ದಿ ಕಾಮಗಾರಿಗಳಾಗಿಲ್ಲ.

ಇದೀಗ ಕ್ಷೇತ್ರ, ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಎದ್ದಿದೆ. ಆ ನಿಟ್ಟಿನಲ್ಲಿ ಮುಂದಿನ ತಮ್ಮ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಫಾಕ್ಟರಿ ತೆರೆಯುವ ಮೂಲಕ ಉದ್ಯೋಗ ಕಲ್ಪಿಸಿಕೊಡುವ ಭರವಸೆ ವ್ಯಕ್ತಪಡಿಸಿದರು.

ಇದೀಗ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರುಗಳಿಗೆ ಆನೆ ಬಲಬಂದಂತಾಗಿದೆ. ಮುಂದಿನ ಯಾವುದೇ ಸಮಸ್ಯೆಗಳು ಕ್ಷೇತ್ರದಲ್ಲಿ ಎದುರಾದಲ್ಲಿ ನ್ಯಾಯಸಮ್ಮತವಾಗಿ ಬಗೆಹರಿಸುವ ಮೂಲಕ ಕ್ಷೇತ್ರದ ಜನತೆ ಜೊತೆ ಉತ್ತಮ ನಂಟನ್ನು ಹೊಂದುವುದಾಗಿ ಹೇಳಿದರು.

Lohit Kumar was Elected as Chikkadevanur Village President ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಈ.ಕೆ.ವಸಂತ, ಸದಸ್ಯರುಗಳಾದ ಸಿ.ಎಸ್.ಅಶೋಕ್, ಸಿ.ಎಸ್.ಚಂದ್ರ ಶೇಖರ್, ಸುಲೋಚನಾ, ಟಿ.ಆರ್.ರಂಗಮ್ಮ, ಎಂ.ಸಿ.ಶೋಭಾ, ಕೆ.ಸಿ.ಗಂಗಾಧರ್, ಸರಸ್ವತಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶ್ರೀಮತಿ ಬಿ.ಎಂ.ಶಾರದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...