Wednesday, April 1, 2026
Wednesday, April 1, 2026

Health awareness and health information ಮಹಿಳೆಯರು ಆರೋಗ್ಯದತ್ತ ಗಮನ ನೀಡಬೇಕು-ವಿಜಯ್ ಕುಮಾರ್

Date:

Health awareness and health information ಮಹಿಳೆಯರು ಸಮಾಜದ ಶಕ್ತಿ, ಕುಟುಂಬಕ್ಕೆ ಆಧಾರ. ಮಹಿಳೆಯರು ಸದೃಢ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚಿನ ಗಮನ ವಹಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.

ಬಿದರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ತಾಪಂ, ಜಿಪಂ ಶಿವಮೊಗ್ಗ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ಜಾಗೃತಿ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜೆಸಿಐ ಸಂಸ್ಥೆಯು ನಿರಂತರ ಸಮಾಜಮುಖಿ ಕಾರ್ಯಕ್ರಮಗಳ ಜತೆಯಲ್ಲಿ ಆರೋಗ್ಯ ಜಾಗೃತಿ ಮೂಡಿಸುತ್ತಿರುವ ಕೆಲಸ ಶ್ಲಾಘನೀಯ. ಇದರಿಂದ ಮಹಿಳೆಯರು ಹಾಗೂ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಮೂಡುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿ ಡಾ. ಲಲಿತಾ ಭರತ್ ಮಾತನಾಡಿ, ಋತುಚಕ್ರ ಒಂದು ಸ್ವಾಭಾವಿಕ ಪ್ರಕ್ರಿಯೆ ಆಗಿದ್ದು, ಮುಜುಗರ ಬೇಡ. ಋತುಚಕ್ರದ ಬಗ್ಗೆ ಮೂಡನಂಬಿಕೆ ಬೇಡ. ಮಹಿಳೆಯರು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಶೌಚಗೃಹ ಸ್ವಚ್ಛ ಆಗಿಟ್ಟುಕೊಳ್ಳಬೇಕು. ಋತುಚಕ್ರದ ತ್ಯಾಜ್ಯಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು ಎಂದರು.

ಮಹಿಳೆಯರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬೇಕು. ಪೌಷ್ಠಿಕಾಂಶ ಇರುವ ಆಹಾರವನ್ನು ಸೇವಿಸಬೇಕು. ನಿಯಮಿಯ ವ್ಯಾಯಾಮ, ವಾಕಿಂಗ್ ಹಾಗೂ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಮಹಿಳಾ ಆರೋಗ್ಯ ಹಾಗೂ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಲಾಯಿತು. ಸಭಿಕರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿದರು. ಜೋನ್ ಕಾರ್ಯಕ್ರಮ ಸಂಯೋಜಕಿ ದಿವ್ಯಾ ಅವರು ಎಲ್ಲ ಶಿಬಿರಾರ್ಥಿ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ವಿತರಿಸಿದರು.

Health awareness and health information ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ, ಸ್ವಚ್ಛ ಭಾರತ ಮಿಷನ್ ಜಿಲ್ಲಾ ಸಮಾಲೋಚಕ ಸಂತೋಷ್‌ಕುಮಾರ್, ಜೋನ್ ಕಾರ್ಯಕ್ರಮ ಸಂಯೋಜಕಿ ದಿವ್ಯಾ, ನಿರ್ದೇಶಕಿ ಶಾರದಾ ಶೇಷಗಿರಿಗೌಡ, ಅಶ್ವಿನಿ, ಕುಮಾರ್, ಬಸಮ್ಮ, ಗೌರಿಶಂಕರ್, ಭೀಮನಾಯಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...