Thursday, June 18, 2026
Thursday, June 18, 2026

Hanuman Jayanti ಶಿವಮೊಗ್ಗದಲ್ಲಿನ ಹನುಮ ಜಯಂತಿ ಉತ್ಸವದ ಮಾಹಿತಿ

Date:

Hanuman Jayanti ಶಿವಮೊಗ್ಗ, ನಗರದ ಪುರಾಣ, ಇತಿಹಾಸ ಪ್ರಸಿದ್ಧ ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಭಾರತೀಯ ವಿಚಾರ ವೇದಿಕೆ, ಭಕ್ತ ಶಿರೋಮಣಿ, ಅನಂತ ರಾಮ ಅಯ್ಯಂಗಾರ್ ಸ್ಮಾರಕ ಟ್ರಸ್ಟ್ ಹಾಗೂ ದೇವಾಲಯ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಜೂ. 1ರಿಂದ 3 ರವರೆಗೆ ಹನುಮ ಜಯಂತಿ ಮಹೋತ್ಸವವು ಆಯೋಜನೆಗೊಂಡಿದೆ. ಇದರ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಪ್ರತಿದಿನ ಸಂಜೆ 7 ಗಂಟೆಗೆ ದೇವಾಲಯದ ಆವರಣದಲ್ಲಿನ ಸಭಾ ಮಂಟಪದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಮೇ. 30ರ ಇಂದು ಶ್ರೀ ಬ್ರಹ್ಮಣ್ಯ ಆಚಾರ್ಯರವರಿಂದ ಉಪನ್ಯಾಸ ಹಾಗೂ ಮೇ. 31ರಂದು ಬೆಂಗಳೂರಿನ ಆಧ್ಯಾತ್ಮ ಚಿಂತಕಿ ವೀಣಾ ಬನ್ನಂಜೆಯವರಿಂದ ರಾಮನ ಭಕ್ತಿ, ಹನುಮನ ಶಕ್ತಿ ಕುರಿತು ಉಪನ್ಯಾಸ ನಡೆಯಲಿದೆ.

* ಧಾರ್ಮಿಕ ಕಾರ್ಯಕ್ರಮಗಳು: 
ಹನುಮ ಜಯಂತಿ ಅಂಗವಾಗಿ, ಜೂ. 1ರಂದು ಸ್ವಾತಿ ನಕ್ಷತ್ರ ಬೆಳಿಗ್ಗೆ 8ರಿಂದ ಶ್ರೀ ಆಂಜನೇಯ, ಶ್ರೀ ನಾರಸಿಂಹರಿಗೆ ಅಭಿಷೇಕ, ನಂತರ ಸುದರ್ಶನ ಹೋಮ, ಸಂಜೆ ಶ್ರೀ ಲಕ್ಷ್ಮೀ ನರಸಿಂಹರ ಪಲ್ಲಕ್ಕಿ ಉತ್ಸವ ನಡೆಯಲಿದೆ.

Hanuman Jayanti ಜೂ. 2ರಂದು ವಿಶಾಖ ನಕ್ಷತ್ರ ಬೆಳಿಗ್ಗೆ ಶ್ರೀ ಆಂಜನೇಯರಿಗೆ ಅಭಿಷೇಕ, ನಂತರ ಶ್ರೀ ರಾಮತಾರಕ ಹೋಮ, ರಾತ್ರಿ ಪಟ್ಟಾಭಿರಾಮರ ಪಲ್ಲಕ್ಕಿ ಉತ್ಸವ, ಜೂ. 3ರಂದು ಅನುರಾಧ ನಕ್ಷತ್ರ ಶ್ರೀ ಹನುಮ ಜಯಂತಿ ಬೆಳಿಗ್ಗೆ ಶ್ರೀ ಆಂಜನೇಯರಿಗೆ ಅಭಿಷೇಕ, ಶ್ರೀ ಮಾರುತಿ ಮೂಲ ಮಂತ್ರ ಹೋಮ, ಸಂಜೆ 7ರಿಂದ ಶ್ರೀ ರಾಮ, ಹನುಮರ ಎದುರು ಉತ್ಸವ, ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ ನಡೆಯಲಿದೆ.

 ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...