Sunday, May 31, 2026
Sunday, May 31, 2026

ವಿದೇಶಿ ಪ್ರಯಾಣಿಕರ ಮಾಹಿತಿ ರಾಜ್ಯ ಸರ್ಕಾರಕ್ಕೆ ಬೇಕು.

Date:

ಕೊರೋನಾ ರೂಪಾಂತರಿ ತಳಿ ಓಮೈಕ್ರಾನ್ ಜಗತ್ತಿನಾದ್ಯಂತ ಹರಡುತ್ತಿದೆ. ಈ ವೈರಸ್ ನನ್ನು ತಡೆಗಟ್ಟಲು, ವಿದೇಶದಿಂದ ಬಂದ ಪ್ರಯಾಣಿಕರ ಮಾಹಿತಿಯನ್ನು ಕೇಂದ್ರ ಸರ್ಕಾರವು ನಿಯಮಿತವಾಗಿ ರಾಜ್ಯಸರ್ಕಾರಗಳಿಗೆ ನೀಡಬೇಕು. ಆಗ ಮಾತ್ರ ವಿದೇಶಿ ಪ್ರಯಾಣಿಕರನ್ನು ಪತ್ತೆ ಮಾಡಲು ಸಾಧ್ಯ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಬೇರೆ ವಿಮಾನ ನಿಲ್ದಾಣಕ್ಕೆ, ಬಂದಿಳಿದ ವಿದೇಶಿ ಪ್ರಯಾಣಿಕರನ್ನು ಗುರುತಿಸಲು ನಮಗೆ ಸಾಧ್ಯವಾಗುತ್ತದೆ. ಆದರೆ ಬೇರೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ಬಂದಿಳಿದು ಅನಂತರ ಬಸ್, ರೈಲು, ಕಾರು ದೇಶ ವಿಮಾನದ ಮೂಲಕ ಮಹಾರಾಷ್ಟ್ರಕ್ಕೆ ಬರುವ ವಿದೇಶಿ ಪ್ರಯಾಣಿಕರನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ಅವರಿಗೆ ಓಮೈಕ್ರಾನ್ ತಳಿಯಿಂದ ಕೋವಿಡ್ ಬಂದರೆ, ಅದನ್ನು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಈ ಅಪಾಯವನ್ನು ತಡೆಯಬೇಕೆಂದರೆ, ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರ ವಿವರವನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ...

Breaking News ಬೇಲಿ ಜಗಳ: ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕರಡಿಗ ಗ್ರಾಮದಲ್ಲಿ ರಸ್ತೆ...