Thursday, March 19, 2026
Thursday, March 19, 2026

World Bicycle Day ಸೈಕಲ್ ಚಾಲನೆಯಿಂದ ದೇಹದ ಸ್ನಾಯುಗಳು ಸದೃಢ-ಶ್ರೀಕಾಂತ್

Date:

World Bicycle Day ಸೈಕಲ್ ಚಾಲನೆಯಿಂದ ದೇಹದ ಸ್ನಾಯುಗಳು ಬಲಗೊಂಡು ಶಕ್ತಿ ತುಂಬುತ್ತದೆ, ಇದರಿಂದ ಅನಾರೋಗ್ಯದಿಂದ ದೂರ ಇರಬಹುದು ಎಂದು “ವಿಶ್ವಸೈಕಲ್ ದಿನಾಚರಣೆ” ಪ್ರಯುಕ್ತ ಶಿವಮೊಗ್ಗ ಸೈಕಲ್ ಕ್ಲಬ್ ಆಯೋಜಿಸಿದ ಜಾತ ಉದ್ಘಟಿಸಿದ ಕ್ಲಬ್ ನ ಅಧ್ಯಕ್ಷ ಶ್ರೀಕಾಂತ್ ಮಾತನಾಡುತ್ತಿದ್ದರು.

ಕಳೆದ 8 ವರ್ಷಗಳಿಂದ ಈ ಕಾರ್ಯಕ್ರಮ ಹಮ್ಮಿ ಕೊಳ್ಳುತ್ತಿದ್ದ, ಸರ್ಕಾರದ ಹಲವಾರು ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕಾರ್ಯ ಸೈಕಲ್ ಕ್ಲಬ್ ಸದಸ್ಯರು ಮಾಡುತ್ತಿದ್ದಾರೆ ಎಂದರು.

ಪರಿಸರ ಸ್ನೇಹಿಯಾದ ಸೈಕಲ್, ಇಂಧನ ಉಳಿಸುತ್ತದೆ, ಹೊಗೆ ಸೂಸುವುದಿಲ್ಲ. ಶಬ್ದಮಾಲಿನ್ಯ ಇರುವುದಿಲ್ಲ ಹಾಗೂ ದೇಹಕ್ಕೆ ಶಕ್ತಿ ತುಂಬಿ ಸದೃಡ ಜೀವನ ನಡೆಸಲು ಸಹಕಾರಿ ಎಂದು ಯೂತ್ ಹಾಸ್ಟೆಲ್ಸ್ ಛೇರ್ಮನ್ ಎಸ್.ಎಸ್.ವಾಗೇಶ್ ನುಡಿದರು.

    ಮಾನಸಿಕ ದೃಡತೆ, ಲವಲವಿಕೆಯ ಜೀವನಕ್ಕೆ ಸೈಕಲ್ ಅತ್ಯುತ್ತಮ ಸಹಕಾರಿ ಎಂದು ರೋಟರಿ ವಿಜಯಕುಮಾರ್ ತಿಳಿಸಿದರು.

World Bicycle Day ತರುಣೋದಯ ಘಟಕದ ಕಾರ್ಯದರ್ಶಿ ಸ್ವಾಗತಿಸಿದರು, ಸೈಕಲ್ ಕ್ಲಬ್ ಕಾರ್ಯದರ್ಶಿ ಗಿರೀಶ್ ಕಾಮತ್ ವಂದಿಸಿದರು ಹರೀಶ್ ಪಾಟಿಲ್ ನಿರೂಪಿಸಿದರು, ಡಿಎಸ್ ಡಿಒ ಸುರೇಶ್, ಚಂದ್ರಕೇಸರಿ, ಮಿಥುನ್, ವಿಜಯೇಂದ್ರ, ರವಿ ನಲವತ್ತು ಜನ ಸದಸ್ಯರು ಜಾತದಲ್ಲಿ ಪಾಲ್ಗೊಂಡು ನಗರದ ಗಾಂಧಿ ಉದ್ಯಾನವನ ದಿಂದ ಪ್ರಾರಂಭಗೊಂಡು ವಿಶ್ವೇಶ್ವರಾಯ ರಸ್ತೆ ಬಾಲರಾಜ್ ಅರಸ್ ರಸ್ತೆ, ನೆಹರು ರಸ್ತೆ, ಬಿಹೆಚ್ ರಸ್ತೆ ಬಸ್ ನಿಲ್ದಾಣದ ಮೂಲಕ ಸಾಗರ್ ರಸ್ತೆ ರಿಂಗ್ ರಸ್ತೆ ಮೂಲಕ ಸ್ವಾತಂತ್ರ್ಯ ಉದ್ಯಾನವನ ಸೇರಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...