Religious Charity Organisation ವಿದ್ಯಾರ್ಥಿಗಳು ತಮ್ಮ ಕಲಿಕಾ ಸಮಯದಲ್ಲಿ ಮನಸ್ಸನ್ನು ಬೇರೆಡೆಗೆ ಹಾಯಿಸದೆ ಶ್ರದ್ಧೆ ಹಾಗೂ ಛಲದಿಂದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯ ಎಂದು ಸರ್ವ ಧರ್ಮ ಸೇವಾ ಸಂಸ್ಥೆ ಮುಖ್ಯಸ್ಥ ಕೆ.ಭರತ್ ಹೇಳಿದರು.
ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸಮೀಪದ ಶಾಂತಿನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ವ ಧರ್ಮ ಸೇವಾ ಸಂಸ್ಥೆ ವತಿ ಯಿಂದ ಏರ್ಪಡಿಸಲಾಗಿದ್ದ ಕನ್ನಡ ಮತ್ತು ಉರ್ದು ಶಾಲಾ ಮಕ್ಕಳಿಗೆ ಉಚಿತ ನೋಟ್ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಸರ್ಕಾರ ಶೈಕ್ಷಣ ಕವಾಗಿ ಅಭಿವೃದ್ಧಿ ಹೊಂದಲು ಹೆಚ್ಚಿನ ಒತ್ತು ನೀಡುತ್ತಿದ್ದು, ಜತೆಗೆ ಉಚಿತ ವಿದ್ಯಾಭ್ಯಾಸ, ಬಿಸಿಯೂಟ, ಹೀಗೆ ಹಲವಾರು ಸವಲತ್ತು ನೀಡುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮವಾಗಿ ವ್ಯಾಸಂಗ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರತಿ ವರ್ಷವೂ ಸಹ ಒಂದೊಂದು ಸರ್ಕಾರಿ ಶಾಲೆಗಳಿಗೆ ನೋಟ್ ಪುಸ್ತಕ ಹಾಗೂ ಪರಿಕರಗಳನ್ನು ನೀಡುತ್ತಾ ಬರಲಾಗಿತ್ತು. ಆದರೆ ಕೊರೋನಾ ಸಂದರ್ಭದಲ್ಲಿ 2-3 ವರ್ಷಗಳಿಂದ ನಿಲ್ಲಿಸಿ ಇದೀಗ ಈ ಶಾಲೆಯಿಂದ ಪುನರಾಂಭ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
Religious Charity Organisation ಪ್ರಸ್ತುತ ದಿನಗಳಲ್ಲಿ ಮಕ್ಕಳ ಪೋಷಕರು ಖಾಸಗೀ ಶಾಲೆಗಳಿಗೆ ಸೇರಿಸುವ ನಿಟ್ಟಿನಲ್ಲಿ ಹಲವಾರು ಕಷ್ಟಗಳನ್ನು ತಂದುಕೊಳ್ಳುತ್ತಿದ್ದಾರೆ. ಖಾಸಗೀ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದು ಇಂದಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಆದ್ದರಿಂದ ರಾಜ್ಯಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಪೋಷಕರಿಗೆ ಹೊರೆಯಾಗದಂತೆ ಹಲವು ಯೋ ಜನೆಗಳನ್ನು ಜಾರಿಗೆ ತಂದಿದ್ದು ಇವುಗಳ ಸದ್ಬಳಕೆ ಮಾಡಿಕೊಂಡು ಮುಂದುವರೆಯಬೇಕು ಎಂದರು.
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ನಗರಸಭಾ ಸದಸ್ಯ ಮಣಿಕಂಠ ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಹೆಚ್ಚು ಧೈರ್ಯವಂತರು, ಬುದ್ಧಿವಂತರಾಗಿರುತ್ತಾರೆ. ಆ ನೆಲೆಯಲ್ಲಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಯಾವುದೇ ಕಾರಣಕ್ಕೂ ಹಿಂದೇಟು ಹಾಕಬಾರದು ಎಂದು ಕಿವಿಮಾತು ಹೇಳಿದರು.
ವಿದ್ಯೆಯಿಂದ ಮಾತ್ರ ಕಳೆದುಕೊಂಡಿದನ್ನು ಮರಳಿ ಪಡೆಯಲು ಸಾಧ್ಯ. ಆದ್ದರಿಂದ ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆಯುವತ್ತ ಹೆಚ್ಚು ಗಮನಹರಿಸಬೇಕು. ಪೋಷಕರು ಕೂಡ ಮಕ್ಕಳ ಶೈಕ್ಷಣ ಕ ಪ್ರಗತಿಗೆ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಕನ್ನಡ ಮತ್ತು ಉರ್ದು ಶಾಲೆಯ ಸುಮಾರು 190 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ಪುಸ್ತಕ ಹಾಗೂ ಲೇಖನಾ ಸಾಮಾಗ್ರಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸರ್ವಧರ್ಮ ಸೇವಾ ಸಂಸ್ಥೆ ಮುಖ್ಯಸ್ಥೆ ಕುಸುಮ ಭರತ್, ಸದಸ್ಯೆ ಮೌಸಿನಾ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೂರ್ತಿ, ಉಪಾಧ್ಯಕ್ಷ ತಬಸುಮ್, ಸದಸ್ಯರಾದ ನವೀನ್, ಮುಖ್ಯಶಿಕ್ಷಕ ಚಂದ್ರಯ್ಯ, ಶಾಲೆಯ ಶಿಕ್ಷಕರಾದ ರಮಾದೇವಿ, ಉನ್ನತಿ ಪೌಂಢೇಷನ್ ಮುಖ್ಯಸ್ಥೆ ನಿರುಪಮ ಮತ್ತಿತರರು ಉಪಸ್ಥಿತರಿದ್ದರು.