Monday, February 2, 2026
Monday, February 2, 2026

Chamber Of Commerce Shivamogga ವಿದ್ಯುತ್ ದರ ಏರಿಕೆ: ಕೈಗಾರಿಕೆ ಮತ್ತು ಶ್ರೀಸಾಮಾನ್ಯರಿಗೆ ಹೊರೆ- ಎನ್.ಗೋಪಿನಾಥ್

Date:

Chamber Of Commerce Shivamogga ವಿದ್ಯುತ್ ದರ ಹೆಚ್ಚಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಕೈಗಾರಿಕೆಗಳಿಗೆ ಆಗುವ ತೊಂದರೆಯನ್ನು ತಪ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹಿಸಿದೆ.

2023ನೇ ಸಾಲಿನಲ್ಲಿ ಅವೈಜ್ಞಾನಿಕವಾಗಿ ವಿದ್ಯುತ್ ದರ ಪರಿಷ್ಕರಿಸಿರುವುದಕ್ಕೆ ವಿರೋಧವಿದೆ. ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯಾದ್ಯಂತ ಕೈಗಾರಿಕಾ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ಹಾಗೂ ಜನಸಾಮಾನ್ಯ ಗ್ರಾಹಕರಿಗೆ ಅತಿಯಾದ ಹೊರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯದ ಕೈಗಾರಿಕಾ ಘಟಕಗಳು ತುಂಬಾ ರೋಗಗ್ರಸ್ಥ ಘಟಕಗಳಾಗಿ ಅಭಿವೃದ್ಧಿ ಕುಂಠಿತವಾಗಿವೆ. ನಿರುದ್ಯೋಗ ಸಮಸ್ಯೆಯ ಉದ್ಭವಕ್ಕೆ ಕಾರಣವಾಗುತ್ತದೆ. ಹೆಚ್ಚಿನ ಕೈಗಾರಿಕೆಗಳು ಹಣಕಾಸು ಸಂಸ್ಥೆಗಳಿಂದ, ಬ್ಯಾಂಕ್‌ಗಳಿಂದ ಸಾಲ ಪಡೆದು ಉದ್ಯಮವನ್ನು ನಡೆಸುತ್ತಿರುವವರಿಗೆ ಆರ್ಥಿಕತೆ ಮೇಲೆ ಹೆಚ್ಚಿನ ದುಷ್ಪರಿಣಾಮ ಬೀರಿ ಉದ್ಯಮವನ್ನು ಮುಚ್ಚುವ ಪರಿಸ್ಥಿತಿಗೆ ಬರಬೇಕಾಗುತ್ತದೆ ಎಂದು ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ತಿಳಿಸಿದ್ದಾರೆ.

Chamber Of Commerce Shivamogga ಕೈಗಾರಿಕೋದ್ಯಮಿಗಳು ಮತ್ತು ಸಾಮಾನ್ಯ ಗೃಹೋಪಯೋಗಿ ಗ್ರಾಹಕರು ತಮ್ಮ ಅಸ್ಥಿತ್ವವನ್ನು ಉಸಿಕೊಳ್ಳಲು ಅನಿವಾರ್ಯವಾಗಿ ಪ್ರತಿಭಟನೆಗೆ ಇಳಿಯುವ ಪ್ರಸಂಗ ಬರಬಹುದು. ನಾಗರೀಕ ಸಂಘಟನೆಗಳು ಕೂಡ ದರ ಹೆಚ್ಚಳದ ವಿರುದ್ಧ ಧ್ವನಿ ಎತ್ತಿವೆ. ತೈಲಬೆಲೆಗಳು ಈಗಾಗಲೆ ಗಗನಕ್ಕೇರಿದ್ದು, ವಿದ್ಯುತ್ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿದ್ಯುತ್ ದರ ಹೆಚ್ಚಳ ಆದೇಶವು ಎಲ್ಲಾ ವರ್ಗದ ಗ್ರಾಹಕರಿಗೆ ಹೆಚ್ಚಿನ ಹೊರೆಯಾಗಲಿದ್ದು, ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ. ಕೈಗಾರಿಕೆಯ ಕಚ್ಛಾವಸ್ತುಗಳ ಬೆಲೆಯ ಮೇಲೆಯೂ ಕೂಡ ಪರಿಣಾಮ ಆಗಲಿದೆ. ಕೈಗಾರಿಕೆಗಳು ಮೂಲೆ ಗುಂಪಾಗುವುದರಲ್ಲಿ ಸಂಶಯವಿಲ್ಲ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅಭಿಪ್ರಾಯಪಟ್ಟಿದ್ದಾರೆ.

ಜನಸಾಮಾನ್ಯರ ಆರ್ಥಿಕ ಹೊರೆ ತಪ್ಪಿಸಲು, ರಾಜ್ಯದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ನೆಲೆಯಲ್ಲಿ ವಿದ್ಯುತ್ ದರ ಪರಿಷ್ಕರಣೆಯ ಹೆಚ್ಚುವರಿ ಹೊರೆಯ ಆದೇಶವನ್ನು ಕೂಡಲೇ ವಾಪಾಸ್ಸು ಪಡೆಯುವಂತೆ ಸಂಘವು ಸರ್ಕಾರವನ್ನು ಒತ್ತಾಯಿಸುತ್ತದೆ.

ವಿಧಾನಸಭಾ ಚುನಾವಣೆಯಲ್ಲಿ ಜಯಶೀಲರಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಹೊಸ ಸರ್ಕಾರ ರಚನೆ ಮಾಡಿರುವುದು ತುಂಬಾ ಸಂತೋಷದಾಯಕ ವಿಚಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಅಭಿನಂದನೆ ಸಲ್ಲಿಸುತ್ತೇವೆ. ಹೊಸ ಸರ್ಕಾರ ರಚನೆಯಾದ ನಂತರ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಸರ್ಕಾರವು ವಿದ್ಯುತ್ ದರ ಹೆಚ್ಚಳದಿಂದ ಆಗುವ ಸಮಸ್ಯೆಯನ್ನು ಅರಿತು ದರ ಪರಿಷ್ಕರಣೆ ಆದೇಶ ಹಿಂಪಡೆಯಬೇಕು ಎಂದು ಮನವಿ ಮಾಡುತ್ತೇವೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...