Friday, June 19, 2026
Friday, June 19, 2026

Visvesvaraya Iron and Steel Plant ವಿಐಎಸ್ಎಲ್ ಅಧ್ಯಕ್ಷರನ್ನ ಭೇಟಿ ಮಾಡಿದ ಸಂಸದ ರಾಘವೇಂದ್ರ

Date:

Visvesvaraya Iron and Steel Plant ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ರವರು ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀ ಅಮರೆಂದು ಪ್ರಕಾಶ್ ರವರನ್ನು ಭೇಟಿ ಮಾಡಿದರು.

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಅದರ ಬದಲಿಗೆ ಸದರಿ ಉಕ್ಕುಸ್ತಾವರವನ್ನು ಪುನಶ್ಚೇತನ ಗೊಳಿಸಲು ಅಗತ್ಯ ಬಂಡವಾಳವನ್ನು ತೊಡಗಿಸುವಂತೆ ಹಾಗೂ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಲು ಕೋರಿಕೊಂಡರು.

Visvesvaraya Iron and Steel Plant ಈ ಸಂದರ್ಭದಲ್ಲಿ ಭದ್ರಾವತಿ ಬಿಜೆಪಿ ಮುಖಂಡರಾದ ಶ್ರೀ ಮಂಗೋಟೆ ರುದ್ರೇಶ್, ವಿಐಎಸ್ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಮತ್ತು ಇತರೆ ಪದಾಧಿಕಾರಿಗಳು, ಹಾಗೆಯೇ ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್, ನೌಕರರ ಅಸೋಸಿಯೇಷನ್ ಅಧ್ಯಕ್ಷರಾದ ಕುಮಾರಸ್ವಾಮಿ ಮತ್ತು ಇತರರು ಹಾಜರಿದ್ದು ಪ್ರತ್ಯೇಕ ಮನವಿಗಳನ್ನು ಈ ಸಂದರ್ಭದಲ್ಲಿ ಅಧ್ಯಕ್ಷರಿಗೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...