Thursday, June 18, 2026
Thursday, June 18, 2026

municipal corporation ಚಿಕ್ಕಮಗಳೂರು ನಗರ ಯುಜಿಡಿ ಕಳಪೆ ಕಾಮಗಾರಿ: ತನಿಖೆಗೆ ಆಗ್ರಹ

Date:

municipal corporation ಚಿಕ್ಕಮಗಳೂರು ನಗರದ ಯುಜಿಡಿ ಹಾಗೂ ಅಮೃತ್ ಕಾಮಗಾರಿ ಅವ್ಯವಹಾರವನ್ನು ತನಿಖೆ ಗೊಳಪಡಿಸುವುದು ಹಾಗೂ ಕಳಪೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಗೆ ನಷ್ಟ ಭರಿಸುವಂತೆ ಸೂಚನೆ ನೀಡಬೇಕು ಎಂದು ನಗರಾಭಿವೃಧ್ದಿ ಸಚಿವರನ್ನು ಸೈಯದ್ ಜಮೀಲ್ ಅಹ್ಮದ್ ಒತ್ತಾಯಿಸಿದ್ದಾರೆ.

ಈ ಸಂಬಂಧ ನಗರಾಭಿವೃದ್ದಿ ಸಚಿವ ಬಿ.ಎಸ್.ಸುರೇಶ್ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿರುವ ನಗರಸಭಾ ಮಾಜಿ ಅಧ್ಯಕ್ಷ ಸೈಯದ್ ಜಮೀಲ್ ಅಹ್ಮದ್ ಕಾಮಗಾರಿ ಅವ್ಯವಹಾರ ತನಿಖೆಪಡಿಸಿ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಗರ ಅಮೃತ್ ಹಾಗೂ ಯುಜಿಡಿ ಕಾಮಗಾರಿಯು 13 ವರ್ಷಗಳಿಂದ ತೆವಳುತ್ತಾ ಸಾಗಿ 57 ಕೋಟಿ ವೆಚ್ಚ ಯುಜಿಡಿ ಕಾಮಗಾರಿ 120 ಕೋಟಿ ಹಣ ವ್ಯಯಿಸಿದರೂ ಮುಕ್ತಾಯವಾಗಿಲ್ಲ. ಈ ಬಗ್ಗೆ ಸಚಿವರು ಐದು ತಿಂಗಳ ವರೆಗೆ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಿದ್ದು ಈ ಕಾಮಗಾರಿಗಳಲ್ಲಿ ನಡೆದ ಅವ್ಯವಹಾರದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಿಲ್ಲ ಎಂದಿದ್ದಾರೆ.

municipal corporation ಇದೇ ರೀತಿ ಕಳಪೆ ಕಾಮಗಾರಿ ನಡೆಸಿರುವವರಿಗೆ ಗಡುವು ನೀಡುತ್ತಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾ ರರು ಕಾಮಗಾರಿ ಪೂರ್ಣಗೊಳಿಸುವುದಿಲ್ಲ. ಕೇವಲ ನೆಪಹೇಳಿ ಪದೇ ಪದೇ ಹೆಚ್ಚುವರಿ ಹಣ ಬಿಡುಗಡೆ ಮಾಡಿಸಿಕೊಂಡು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಹಣ ಈ ರೀತಿ ಪೋಲು ಮಾಡುತ್ತಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಈ ಕಾಮಗಾರಿಗಳ ಕಾರ್ಯವೈಖರಿ ಬಗ್ಗೆ ಹಾಗೂ ಕಾಲಮಿತಿಯೊಳಗೆ ಪೂರ್ಣಗೊಳಿಸಲು ನಗರದ ಜವಾಬ್ದಾರಿಯುತ ವ್ಯಕ್ತಿಗಳನ್ನು ಮೇಲುಸ್ತುವಾರಿ ಸಮಿತಿಯನ್ನು ರಚಿಸಿ ನಗರಸಭಾ ಮಾಜಿ ಅಧ್ಯಕ್ಷರಾಗಿರುವ ತಮ್ಮನ್ನು ಕಮಿಟಿಯೊಳಗೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...