Friday, March 20, 2026
Friday, March 20, 2026

Department Of Ex Serviceman ಚಿಕ್ಕಮಗಳೂರು ಜಿಲ್ಲಾ ಮಾಜಿ ಸೈನಿಕರ ಸಂಘಕ್ಕೆ ನಿವೇಶನ ನೀಡಲು ಮನವಿ

Date:

Department Of Ex Serviceman ಮಾಜಿ ಸೈನಿಕರ ಸಂಘಕ್ಕೆ ನೂತನ ಕಟ್ಟಡ ನಿರ್ಮಿಸಲು ನಿವೇಶನ ಹಾಗೂ ಸೈನಿಕರ ಕುಟುಂಬಕ್ಕೆ ಮೂಲಸೌಕರ್ಯ ಒದಗಿಸಿಕೊಡಬೇಕು ಎಂದು ಜಿಲ್ಲಾ ಮಾಜಿ ಸೈನಿಕರ ಸಂಘವು ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಮಾಜಿ ಸೈನಿಕರಿಗೆ ನಿವೇಶನ ಒದಗಿಸಿಕೊಡುವ ಮೂಲಕ ಸುಗಮ ಜೀವನ ನಡೆಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಮಂಜುನಾಥ್ ಮಾಜಿ ಸೈನಿಕರ ಸಂಘಕ್ಕೆ ತಾತ್ಕಾಲಿಕವಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಸಂಘದ ಕಚೇರಿ ಸ್ಥಾಪಿಸಲಾಗಿದೆ. ಆದರೆ ಇನ್ನಿತರೆ ಕಾರ್ಯಕ್ರಮ ನಡೆಸಲು ಸ್ಥಳಾವಕಾಶವಿಲ್ಲದ ಕಾರಣ ನೂತನ ಕಟ್ಟಡ ನಿರ್ಮಿಸಲು ನಿವೇಶನ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

Department Of Ex Serviceman ಈಗಾಗಲೇ ಮಾಜಿ ಸೈನಿಕರಿಗೆ ನಿವೃತ್ತಿ ನಂತರ ಕೃಷಿಗಾಗಿ ಸರ್ಕಾರಿ ಭೂಮಿಯನ್ನು ಗುರುತಿಸಿ ಭೂ ಕಂದಾ ಯ ಕಾಯ್ದೆಯಡಿ ಪ್ರತ್ಯೇಕವಾಗಿ ಕಾಯ್ದಿರಿಸಿ ನಂತರ ಅನುಗುಣವಾಗಿ ಆದ್ಯತೆ ಹಾಗೂ ಅರ್ಹತೆ ಮೇಲೆ ಭೂಮಿಯನ್ನು ಹಂಚಿಕೆ ಮಾಡಿ ಮಂಜೂರು ಮಾಡಲು ಸರ್ಕಾರವು ಆದೇಶ ನೀಡಲಾಗಿದೆ ಎಂದರು.

ಒಂದು ವೇಳೆ ಸರ್ಕಾರಿ ಭೂಮಿ ಲಭ್ಯವಾಗದಿದ್ದಲ್ಲಿ ಗ್ರಾಮಾಂತರ 2400 ಚದರಡಿ ಅಥವಾ ನಗರ ಪ್ರದೇಶದಲ್ಲಿ 1200 ಚದರಡಿ ನಿವೇಶನವನ್ನು ಪ್ರಸ್ತುತ ಜಾರಿಯಲ್ಲಿರುವ ವಸತಿ ಯೋಜನೆಗಳಲ್ಲಿ ಮಾಜಿ ಸೈನಿಕ ರಿಗೆ ಹಂಚಿಕೆ ಮಾಡಲು ಉಲ್ಲೇಖ ಅಧಿಸೂಚನೆಯಲಿ ತಿಳಿಸಲಾಗಿರುವ ಹಿನ್ನೆಲೆಯಲ್ಲಿ ಅದನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ನಿವೇಶನಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕರ ಕಚೇರಿಯಿಂದ ಹಾಸನದ ಸೈನಿಕರ ಕಲ್ಯಾಣ ಮತ್ತು ಪುನರ್ ವಸತಿ ಮಾಹಿತಿ ಇಲಾಖೆಗೆ ಕಳುಹಿಸಲಾಗಿದೆ. ಈ ಕಚೇರಿಯಿಂದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಮಾಹಿತಿ ರವಾನಿಸಲಾಗಿದ್ದು ಇದುವರೆಗೂ ನಮ್ಮ ಯಾವ ರೀತಿಯ ಸೂಚನೆಗಳನ್ನು ಬಂದಿರುವುದಿಲ್ಲ ಎಂದರು.

ಕೂಡಲೇ ಮಾಜಿ ಸೈನಿಕರ ಕುಟುಂಬಕ್ಕೆ ಸರ್ಕಾರಿ ಭೂಮಿ ಲಭ್ಯವಾಗದಿದ್ದಲ್ಲಿ ನಿವೇಶನ ಹಾಗೂ ಕಟ್ಟಡ ನಿರ್ಮಿಸಲು ಸೂಕ್ತ ಜಾಗ ಗುರುತಿಸಿಕೊಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ನೂತನ ಶಾಸಕರಾಗಿ ಆಯ್ಕೆಗೊಂಡ ಹೆಚ್.ಡಿ.ತಮ್ಮಯ ಅವರಿಗೆ ಮಾಜಿ ಸೈನಿಕರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಹರಿಶ್, ಖಜಾಂಚಿ ಪಾಯಿಸ್, ಕಾರ್ಯದರ್ಶಿ ಗೋಪಾಲಕೃಷ್ಣ, ಸದಸ್ಯರು ಗಳಾದ ಹೆಚ್.ಎಂ.ಮಂಜುನಾಥಸ್ವಾಮಿ, ಪಿ.ನಾಗರಾಜ್, ಪ್ರಾನ್ಸಿಸ್ ಡಿಸೋಜಾ, ಫರ್ನಾಂಡೀಸ್, ವೇಣುಗೋ ಪಾಲ್, ರೇವಣ್ಣ, ರಾಮಚಂದ್ರಶೆಟ್ಟಿ, ರವಿಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...