ರಾಜ್ಯದಲ್ಲಿ ಹೊಸದಾಗಿ ಘೋಷಿಸಿರುವ 50 ತಾಲೂಕು ಕೇಂದ್ರಗಳಿಗೆ ಇನ್ನೂ ಅಗತ್ಯ ಮೂಲ ಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿಳಂಬ ಧೋರಣೆ ವಿರುದ್ಧ ಹೈಕೋರ್ಟ್ ಸಿಡಿದೆದ್ದಿದೆ.
ಸರ್ಕಾರದ ಬಳಿ ಹಣವಿಲ್ಲವೆಂದರೆ ಹೊಸ ತಾಲೂಕುಗಳ ರಚನೆ ಆದೇಶವನ್ನು ರದ್ದು ಪಡಿಸಿ. ಹಣಕಾಸು ಲಭ್ಯವಾದ ನಂತರ ತಾಲೂಕು ಕಚೇರಿ ಹಾಗೂ ಮೂಲಸೌಕರ್ಯ ಒದಗಿಸುವ ಬಗ್ಗೆ ಯೋಚಿಸಿ ಎಂದು ಹೈಕೋರ್ಟ್ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
2018ರಲ್ಲಿ ಸರ್ಕಾರವು ಹೊಸ 50 ತಾಲೂಕುಗಳನ್ನು ಘೋಷಣೆ ಮಾಡಿತ್ತು. ಆದರೆ ಮೂರು ವರ್ಷಗಳ ಬಳಿಕವೂ ಮೂಲ ಸೌಕರ್ಯ ಕಲ್ಪಿಸಲಾಗಿಲ್ಲ ಎಂದು ಆರೋಪಿಸಿ ಬೀದರ್ ನ ಸಾಮಾಜಿಕ ಕಾರ್ಯಕರ್ತ ಗುರುನಾಥ್ ವಡ್ಡೆ ಪಿಐಎಲ್ ದಾಖಲಿಸಿದ್ದರು. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಈ ಅರ್ಜಿ ವಿಚಾರಣೆ ಬಂದಿತ್ತು.
ಸರ್ಕಾರದ ಪ್ರಮಾಣಪತ್ರ ಸಮಾಧಾನ ತಂದಿಲ್ಲ. ಹೊಸ ತಾಲೂಕುಗಳಿಗೆ ಕಛೇರಿ ಸ್ಥಾಪಿಸಲು ಗರಿಷ್ಟ ಕಾಲಮಿತಿ ಹಾಕಿಕೊಳ್ಳಲು 2020 ರೈ ಫೆಬ್ರುವರಿ 3ರಂದು ನಿರ್ದೇಶನ ನೀಡಲಾಗಿತ್ತು. ಆದರೆ ಸರ್ಕಾರ ಹಣ ಬಿಡುಗಡೆ ಮಾಡಲಾಗಿದೆ ಕ್ರಮಕೈಗೊಳ್ಳಲಾಗುತ್ತಿದೆ ಎಂದಷ್ಟೇ ಹೇಳಿದ್ದು, ಅಫಿಡೆವಿಟ್ ಅಸ್ಪಷ್ಟವಾಗಿದೆ. ಆದ್ದರಿಂದ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದ ಹೈಕೋರ್ಟ್ ವಿಚಾರಣೆಯನ್ನು 2022ರ ಜ.14ಕ್ಕೆ ಮುಂದೂಡಿತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.