Sunday, August 2, 2026
Sunday, August 2, 2026

Indian Medical Association ಯೋಗದಿಂದ ದೇಹ ಮತ್ತು ಮನಸ್ಸಿಗೆ ಸಾಮರಸ್ಯ ಬೆಸೆಯುತ್ತದೆ-ಡಾ.ಅರುಣ್

Date:

9 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತೀಯ ವೈದ್ಯಕೀಯ ಸಂಘ , ಶಿವಮೊಗ್ಗ ಶಾಖೆಯಲ್ಲಿ ಆಚರಿಸಲಾಯಿತು .

ವೈದ್ಯ ಸಮೂಹಕ್ಕೆ ಯೋಗ ದಿನದ ಪಠ್ಯದ ಪ್ರಕಾರ ಅಷ್ಟಾಂಗ ಯೋಗ ಪಟುಗಳು , ಅಮೃತ ಯೋಗ ಕೇಂದ್ರದ ಶ್ರೀ . ಆದಿತ್ಯ ಹಾಗು ಕುಮಾರಿ ಅನನ್ಯ ಅವರು ಯೋಗ ಕಾರ್ಯಕ್ರಮ ನಡೆಸಿದರು .

Indian Medical Association ಯೋಗವು 6,000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ . ಯೋಗದ ಪ್ರಾಮುಖ್ಯತೆ ಅರಿತ ಜನ ತಮ್ಮ ಉತ್ತಮ ಆರೋಗ್ಯಕ್ಕಾಗಿ ಯೋಗ ಅಭ್ಯಸಿಸಲು ಮುಂದಾಗಿದ್ದಾರೆ. ಅಂತೆಯೇ ಹಲವಾರು ವೈದ್ಯರೂ ಕೂಡ ತಮ್ಮ ದಿನಚರಿಯಲ್ಲಿ ಯೋಗದ ಅಭ್ಯಾಸ ಮಾಡಿ, ಪ್ರಾಮುಖ್ಯತೆ ತಿಳಿಯದವರಿಗೆ ಅದರ ಲಾಭದ ಬಗ್ಗೆ ತಿಳಿ ಹೇಳಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ .

ಇದರಿಂದ ಮನಸ್ಸು, ದೇಹ ಮತ್ತು ಮನುಷ್ಯ ಮತ್ತು ಪ್ರಕೃತಿಯ ನಡುವೆ ಪರಿಪೂರ್ಣ ಸಾಮರಸ್ಯವನ್ನು ಬೆಸೆಯುತ್ತದೆ ಎಂದು ಐಎಂಎ ಅಧ್ಯಕ್ಷರಾದ ಡಾ . ಅರುಣ್ ಎಂ . ಎಸ್ ನುಡಿದರು .

ಯೋಗ ದಿನದ ಆಚರಣೆಯಲ್ಲಿ ಸುಮಾರು 25 ಜನ ವೈದ್ಯರು ಪಾಲ್ಗೊಂಡಿದ್ದರು . ಕಾರ್ಯದರ್ಶಿ ಡಾ. ರಕ್ಷಾ ರಾವ್ , ಖಜಾಂಚಿ ಡಾ. ಶಶಿಧರ್ , ಡಾ. ರಮೇಶ್ , ಡಾ. ಶಂಭುಲಿಂಗ ಸೇರಿದಂತೆ ಹಲವಾರು ವೈದ್ಯರು ನೆರೆದಿದ್ದರು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...