Monday, December 8, 2025
Monday, December 8, 2025

ಬಿಸಿಯೂಟ ಶಿಕ್ಷಕರಿಗೆ ಬಿಸಿ ತುಪ್ಪ!

Date:

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿ ತಿಂಗಳಾಗಿದೆ. ಅದಕ್ಕೆ ಅನುದಾನದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗಾಗಿ ಅಕ್ಷರ ದಾಸೋಹ ಶಿಕ್ಷಕರ ಜೇಬಿಗೆ ಬಿಸಿಯಾಗಿದೆ. ಶಿಕ್ಷಕರು ಕೈಯಿಂದ ಹಣ ಹಾಕಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದಾರೆ.
ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಲು ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೆ ಕೊಡುವ ಹಣಕ್ಕೆ ತಕ್ಕದಾದ ಅನುದಾನವನ್ನು ನೀಡಬೇಕು. ಸರ್ಕಾರ ನೀಡುತ್ತಿರುವ ಅನುದಾನ ಏನೇನೂ ಸಾಲದು. ಬೆಲೆ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಸವರಾಜು ಸಂಗಪ್ಪ ನವರು ತಿಳಿಸಿದ್ದಾರೆ.
ಸರ್ಕಾರದ ಬಿಸಿಊಟದ ಲೆಕ್ಕಚಾರ ಶಿಕ್ಷಕರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆ ಹೊಡೆತ ಬಾಧಿಸುತ್ತಿದೆ. ತರಕಾರಿ ಸೇರಿದಂತೆ ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಸರ್ಕಾರ ಕೊಡುವ ಅಕ್ಷರ ದಾಸೋಹ ಅನುದಾನ ಯಾವುದಕ್ಕೂ ಸಾಲದಂತಾಗಿದೆ.
ಈಗ ಬಹುಪಾಲು ಬೇಳೆ ಬಂದಿದೆ. ಎಣ್ಣೆ ಕೂಡ ಸರಬರಾಜಾಗಿದೆ. ಉಪ್ಪು ಸದ್ಯದಲ್ಲೇ ಪೂರೈಕೆಯಾಗಲಿದೆ. ಕೆಲವೇ ದಿನಗಳಲ್ಲಿ ಎಲ್ಲೆಡೆ ಬಿಸಿ ಊಟಕ್ಕೆ ಬೇಕಾದ ಸಾಮಗ್ರಿಗಳು ಸಮರ್ಪಕವಾಗಿ ಸರಬರಾಜು ಆಗಲಿದೆ ಎಂದು ಚಿಕ್ಕಬಳ್ಳಾಪುರದ ಅಕ್ಷರ ದಾಸೋಹ ಅಧಿಕಾರಿಯಾದ ಶೈಲಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...