Tuesday, March 24, 2026
Tuesday, March 24, 2026

ಬಿಸಿಯೂಟ ಶಿಕ್ಷಕರಿಗೆ ಬಿಸಿ ತುಪ್ಪ!

Date:

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿ ತಿಂಗಳಾಗಿದೆ. ಅದಕ್ಕೆ ಅನುದಾನದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗಾಗಿ ಅಕ್ಷರ ದಾಸೋಹ ಶಿಕ್ಷಕರ ಜೇಬಿಗೆ ಬಿಸಿಯಾಗಿದೆ. ಶಿಕ್ಷಕರು ಕೈಯಿಂದ ಹಣ ಹಾಕಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದಾರೆ.
ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಲು ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೆ ಕೊಡುವ ಹಣಕ್ಕೆ ತಕ್ಕದಾದ ಅನುದಾನವನ್ನು ನೀಡಬೇಕು. ಸರ್ಕಾರ ನೀಡುತ್ತಿರುವ ಅನುದಾನ ಏನೇನೂ ಸಾಲದು. ಬೆಲೆ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಸವರಾಜು ಸಂಗಪ್ಪ ನವರು ತಿಳಿಸಿದ್ದಾರೆ.
ಸರ್ಕಾರದ ಬಿಸಿಊಟದ ಲೆಕ್ಕಚಾರ ಶಿಕ್ಷಕರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆ ಹೊಡೆತ ಬಾಧಿಸುತ್ತಿದೆ. ತರಕಾರಿ ಸೇರಿದಂತೆ ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಸರ್ಕಾರ ಕೊಡುವ ಅಕ್ಷರ ದಾಸೋಹ ಅನುದಾನ ಯಾವುದಕ್ಕೂ ಸಾಲದಂತಾಗಿದೆ.
ಈಗ ಬಹುಪಾಲು ಬೇಳೆ ಬಂದಿದೆ. ಎಣ್ಣೆ ಕೂಡ ಸರಬರಾಜಾಗಿದೆ. ಉಪ್ಪು ಸದ್ಯದಲ್ಲೇ ಪೂರೈಕೆಯಾಗಲಿದೆ. ಕೆಲವೇ ದಿನಗಳಲ್ಲಿ ಎಲ್ಲೆಡೆ ಬಿಸಿ ಊಟಕ್ಕೆ ಬೇಕಾದ ಸಾಮಗ್ರಿಗಳು ಸಮರ್ಪಕವಾಗಿ ಸರಬರಾಜು ಆಗಲಿದೆ ಎಂದು ಚಿಕ್ಕಬಳ್ಳಾಪುರದ ಅಕ್ಷರ ದಾಸೋಹ ಅಧಿಕಾರಿಯಾದ ಶೈಲಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...