Friday, October 4, 2024
Friday, October 4, 2024

ಸಾವಯವ ಮತ್ತು ಸಿರಿಧಾನ್ಯ ಮೇಳದ ಲಾಭ ಪಡೆಯಲು ಬಿ.ಸಿ.ಪಾಟೀಲ್ ಕರೆ

Date:

ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು‌ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ‌ ಏರ್ಪಡಿಸುವ ನಿಟ್ಟಿನಲ್ಲಿ
ಕೃಷಿ ಇಲಾಖೆ , ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಕರ್ನಾಟಕ ಅಡಆತ ಸೇವೆ ಅಧಿಕಾರಿಗಳ ಸಂಘ ಸಹಯೋಗದೊಂದಿಗೆ ಸಾವಯವ ಹಾಗೂ ಸಿರಿಧಾನ್ಯ ಮೇಳ
ಹಮ್ಮಿಕೊಳ್ಳಲಾಗಿದೆ.


ಇದೇ ಶನಿವಾರ ಡಿ.4 ಮತ್ತು 5 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕೆ.ಎ.ಎಸ್ ಅಧಿಕಾರಿಗಳ ಸಂಘದಲ್ಲಿ ಮೇಳ ಆಯೋಜನೆಗೊಂಡಿದೆ.
ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದು, ಮೇಳದಲ್ಲಿ ಸಾವಯವ ಹಾಗೂ ಸಿರಿಧಾನ್ಯ ಬೆಳೆಯಲ್ಲಿ ಸಾಧನೆಗೈದ ಪ್ರಗತಿಪರ ರೈತರಿಂದ ವಿಚಾರ ವಿನಿಮಯ,ಸಾಯವವ ಸಿರಿಧಾನ್ಯ ಕೃಷಿಯ ಮಹತ್ವವನ್ನು ಸಾರಲಾಗುತ್ತಿದೆ.ಇದರೊಂದಿಗೆ ಮೇಳದಲ್ಲಿ ಈ ಉತ್ಪನ್ನಗಳ ವಸ್ತುಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿದೆ.
ಸಾವಯವ ಪದಾರ್ಥಗಳನ್ನು ಉಪಯೋಗಿಸುವದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಈ ಸಾವಯವ ಕೃಷಿಯಿಂದ ಸಿಗುವ ಪದಾರ್ಥಗಳು ನಮ್ಮ ಸದೃಢ ಮತ್ತು ಆರೋಗ್ಯ ಯುತ ಬದುಕು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ ಎನ್ನುವ ಬಯಕೆ ನಮ್ಮದು. ಆ ದಿಸೆಯಲ್ಲಿ ಆರೋಗ್ಯ ಔಷಧಿಗಾಗಿ ಮತ್ತು ದೇಹಕ್ಕೆ ಅತಿ ಉಪಯುಕ್ತ ಸಿರಿಧಾನ್ಯ ಮತ್ತು ದವಸ ಧಾನ್ಯ ಬೆಳೆಗಳ ಉಪಯೋಗದ ಬಗೆ ಮಾಹಿತಿ ನೀಡಲಾಗುತ್ತಿದೆ.ಅಲ್ಲದೆ ಇವುಗಳ ಕೃಷಿ ಬಳಕೆಯಿಂದ ಆಗುವ ಲಾಭಾಂಶದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲು ಹಂಚಿಕೊಳ್ಳಲು ಮೇಳ ಉಪಯುಕ್ತವಾಗಲಿದೆ.ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...