ರೈತರಿಗೆ ಯಾವುದೇ ಕಾರಣಕ್ಕೂ ಬೆಳೆವಿಮೆ ಕಂಪನಿಗಳಿಂದ ಅನ್ಯಾಯವಾಗಲು ಬಿಡುವುದಿಲ್ಲ. ಈಗಾಗಲೇ ಕಂಪನಿಗಳಿಗೆ ತಾಕೀತು ಮಾಡಲಾಗಿದೆ. ವಂಚನೆ ಎಸಗಲು ಬಿಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ಬೆಳೆ ಹಾನಿಯ ಬಗ್ಗೆ ಈಗಾಗಲೇ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಎನ್ ಡಿಆರ್ ಎಫ್ ,ಎಸ್ ಡಿ ಆರ್ ಎಫ್ ವರದಿ ಆಧಾರದ ಮೇಲೆ ಬರುವ ದಿನಗಳಲ್ಲಿ ಪರಿಹಾರ ನೀಡಲಿದ್ದಾರೆ. ನವೆಂಬರ್ ತಿಂಗಳಲ್ಲಿ 5 ಲಕ್ಷ ಹೆಕ್ಟೇರ್ ಗೂ ಹೆಚ್ಚು ಬೆಳೆ ಹಾನಿಯಾಗಿದೆ. ಜುಲೈನಿಂದ ನವೆಂಬರ್ ತನಕ ಅದರ ಪ್ರಮಾಣ 11 ಲಕ್ಷಕ್ಕೇರಿದೆ. ಈಗಾಗಲೇ ಈ ಬಗ್ಗೆ ಸಿಎಂ ಮಾಹಿತಿ ನೀಡಿದ್ದು, ನವೀನ 30ರಿಂದಲೇ ಪರಿಹಾರ ಒದಗಿಸುವ ಕೆಲಸ ನಡೆದಿದೆ ಎಂದು ತಿಳಿಸಿದ್ದಾರೆ.
ಬೆಳೆ ವಿಮೆ ನೀಡದ ಕಂಪನಿಗಳಿಗೆ ಎಚ್ಚರಿಕೆ.
Date: