ಹೊಳೆಹೊನ್ನೂರು ಸಮೀಪದ ಡಿ.ಬಿ. ಹಳ್ಳಿ ಗ್ರಾಮದಲ್ಲಿ ಕೊರೋನ ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದವರ ಮನೆಗೆ ಭದ್ರಾವತಿ ತಹಶೀಲ್ದಾರ ಪ್ರದೀಪ್ ಅವರು ಖುದ್ದು ಮನೆಬಾಗಿಲಿಗೆ ಹೋಗಿ ಮನವೊಲಿಸಿದ್ದಾರೆ.
ಕಲ್ಲಿಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಿ.ಬಿ. ಹಳ್ಳಿ ಗ್ರಾಮದಲ್ಲಿ ಕೆಲವರು ಕರೋನ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದರು.
ಆರೋಗ್ಯ ಇಲಾಖೆ ಹಾಗೂ ಪಂಚಾಯತಿ ಸಿಬ್ಬಂದಿ ಕೆಲವು ಬಾರಿ ಲಸಿಕೆ ಹಿಡಿದು ಮನೆಗೆ ಹೋದರು ಲಸಿಕೆ ಹಾಕಿಸಿಕೊಳ್ಳಲು ನಿರಾಕರಿಸಿದರು.
ಈ ವಿಷಯ ತಹಶೀಲ್ದಾರ್ ಪ್ರದೀಪ್ ಅವರಿಗೆ ತಿಳಿಸಲಾಯಿತು. ತಹಶೀಲ್ದಾರ್ ಅವರು ಖುದ್ದಾಗಿ ತಾವೇ ಆರೋಗ್ಯ ಸಿಬ್ಬಂದಿಯೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದರು. ಅಲ್ಲಿನ ಜನರಿಗೆ ಲಸಿಕೆಯ ಬಗ್ಗೆ ಮಾಹಿತಿ ನೀಡಿದರು. ಪ್ರಸ್ತುತ ಕೋವಿಡ್ ಸನ್ನಿವೇಶಕ್ಕೆ ಲಸಿಕೆ ಯ ಪ್ರಾಮುಖ್ಯತೆಯ ಬಗ್ಗೆ ಮನಯೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಸುಮಾರು 10 ಜನರಿಗೆ ಸ್ಥಳದಲ್ಲಿಯೇ ಲಸಿಕೆಯನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಎಂ.ವಿ. ಅಶೋಕ್, ಮಾರಶೆಟ್ಟಿಹಳ್ಳಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಹಮೀದಾ ಇನ್ನು ಮುಂತಾದವರು ಉಪಸ್ಥಿತರಿದ್ದರು.