ಹೊಸನಗರ ತಾಲ್ಲೂಕಿನ ಶರಾವತಿ ನದಿ ಯಲ್ಲಿ ದಿನನಿತ್ಯವೂ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ದಿನೇ ದಿನೇ ಕೇಳಿಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಶರಾವತಿ ನದಿ ಪಾತ್ರದ ವಿವಿಧೆಡೆ ಭೇಟಿ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಂ. ಆರ್. ಆದರ್ಶ ತಿಳಿಸಿದ್ದಾರೆ.
ತಾಲೂಕಿನಲ್ಲಿ , ಸೊನಲೆ ಮತ್ತು ತ್ರಿಣಿವೆ ಪಂಚಾಯಿತಿ ವ್ಯಾಪ್ತಿಯ ಶರಾವತಿ ನದಿ ಪಾತ್ರದಲ್ಲಿ ಮೊದಲು ಮುಳುಗಡೆ ನೀರು ಇಳಿಸಲಾಗಿತ್ತು. ನದಿಪಾತ್ರದ ವ್ಯಾಪಕವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೇರೆ ಮಾರ್ಗದಿಂದ ನದಿಗೆ ಹೋಗುವ ದಾರಿಗೆ ಟ್ರೆಂಚ್ ಹೊಡೆಯಲಾಗಿದೆ. ಅರಣ್ಯಾಧಿಕಾರಿಗಳು ನದಿ ಬಳಿ ಹೋಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇದಕ್ಕೂ ಮೀರಿ ಅಕ್ರಮ ಮರಳು ಸಾಗಾಣಿಕೆ ಮುಂದುವರೆದರೆ ವಾಹನಗಳ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಾಣಿಕೆಗೆ ಅವಕಾಶಮಾಡಿಕೊಡುವ ನದಿಪಾತ್ರದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಅಕ್ರಮಕ್ಕೆ ಸಹಾಯವನ್ನು ಮಾಡಿದರೆ ಮುಲಾಜಿಲ್ಲದೆ ದೂರನ್ನು ದಾಖಲಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಆರ್. ಆದರ್ಶ ಅವರು ತಿಳಿಸಿದ್ದಾರೆ.