Monday, December 8, 2025
Monday, December 8, 2025

ಲಿಖಿತ ಭರವಸೆ ಕೊಟ್ಟರೆ ಮಾತ್ರ ಪ್ರತಿಭಟನೆ ವಾಪಸ್

Date:

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಕಾನೂನು ಬೆಂಬಲ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಹಠ ಹಿಡಿದಿದ್ದ ರೈತ ಸಂಘಟನೆಗಳು ಈಗ ಪಟ್ಟನ್ನು ಕೊಂಚ ಸಡಿಲಿಸಿವೆ. ತಮ್ಮ ಇತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ಹಿಂಪಡೆಯಬಹುದು ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ.
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಧೇಯಕವನ್ನು ಸಂಸತ್ ನಲ್ಲಿ ಅಂಗೀಕರಿಸಿರುವ ಕೇಂದ್ರ ಸರಕಾರವು ಈಗ ರೈತ ಸಂಘಟನೆಗಳ ಜೊತೆ ಮಾತುಕತೆಗೆ ಮುಂದಾಗಿದೆ. ಪ್ರತಿಭಟನಾನಿರತ 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಸ್ಪಷ್ಟಪಡಿಸಿದೆ.
ಕೇಂದ್ರದಿಂದ ಪಂಜಾಬ್ ರೈತ ಒಕ್ಕೂಟದ ನಾಯಕರಿಗೆ ಕರೆ ಬಂದಿದೆ. ರೈತರ ಬೇಡಿಕೆ ಈಡೇರಿಸುವುದು, ಸಮಸ್ಯೆ ಬಗೆಹರಿಸುವ ಕುರಿತು ರಚಿಸಲಿರುವ ಸಮಿತಿಗೆ ಎಸ್ ಕೆಎಂ ನ ಐವರು ಸದಸ್ಯರ ಹೆಸರು ತಿಳಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದೆ.
ಸರಕಾರ ರಚಿಸುವ ಸಮಿತಿಯಲ್ಲಿ ಯಾರಿದ್ದಾರೆ? ಯಾವ ಉದ್ದೇಶಕ್ಕಾಗಿ ಸಮಿತಿ ರಚಿಸಲಾಗುತ್ತಿದೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅದರಲ್ಲೂ, ಇದರ ಕುರಿತು ಲಿಖಿತ ಮಾಹಿತಿಯನ್ನು ಒದಗಿಸಿಲ್ಲ. ಹಾಗಾಗಿ ಇದುವರೆಗೆ ನಾವು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...