Monday, July 27, 2026
Monday, July 27, 2026

ಲಿಖಿತ ಭರವಸೆ ಕೊಟ್ಟರೆ ಮಾತ್ರ ಪ್ರತಿಭಟನೆ ವಾಪಸ್

Date:

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಕಾನೂನು ಬೆಂಬಲ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಹಠ ಹಿಡಿದಿದ್ದ ರೈತ ಸಂಘಟನೆಗಳು ಈಗ ಪಟ್ಟನ್ನು ಕೊಂಚ ಸಡಿಲಿಸಿವೆ. ತಮ್ಮ ಇತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ಹಿಂಪಡೆಯಬಹುದು ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ.
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಧೇಯಕವನ್ನು ಸಂಸತ್ ನಲ್ಲಿ ಅಂಗೀಕರಿಸಿರುವ ಕೇಂದ್ರ ಸರಕಾರವು ಈಗ ರೈತ ಸಂಘಟನೆಗಳ ಜೊತೆ ಮಾತುಕತೆಗೆ ಮುಂದಾಗಿದೆ. ಪ್ರತಿಭಟನಾನಿರತ 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಸ್ಪಷ್ಟಪಡಿಸಿದೆ.
ಕೇಂದ್ರದಿಂದ ಪಂಜಾಬ್ ರೈತ ಒಕ್ಕೂಟದ ನಾಯಕರಿಗೆ ಕರೆ ಬಂದಿದೆ. ರೈತರ ಬೇಡಿಕೆ ಈಡೇರಿಸುವುದು, ಸಮಸ್ಯೆ ಬಗೆಹರಿಸುವ ಕುರಿತು ರಚಿಸಲಿರುವ ಸಮಿತಿಗೆ ಎಸ್ ಕೆಎಂ ನ ಐವರು ಸದಸ್ಯರ ಹೆಸರು ತಿಳಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದೆ.
ಸರಕಾರ ರಚಿಸುವ ಸಮಿತಿಯಲ್ಲಿ ಯಾರಿದ್ದಾರೆ? ಯಾವ ಉದ್ದೇಶಕ್ಕಾಗಿ ಸಮಿತಿ ರಚಿಸಲಾಗುತ್ತಿದೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅದರಲ್ಲೂ, ಇದರ ಕುರಿತು ಲಿಖಿತ ಮಾಹಿತಿಯನ್ನು ಒದಗಿಸಿಲ್ಲ. ಹಾಗಾಗಿ ಇದುವರೆಗೆ ನಾವು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...

S.N. Channabasappa ನೀಟ್ ಹೆಸರಿನಲ್ಲಿನ ಕಾನೂನು ಭಂಜಕರನ್ನ ಜೈಲಿಗಟ್ಟುವ ಧೈರ್ಯವಿಲ್ಲದ ಗೃಹಸಚಿವ ಪ್ರಿಯಾಂಕ ಖರ್ಗೆ- ಶಾಸಕ ಚೆನ್ನಿ ಆಕ್ರೋಶ

S.N. Channabasappa "ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ನೀಟ್...