Arun Kumar is the Driver of the Newspaper Delivery Vehicle ಪತ್ರಿಕೆಗಳ ವಿತರಣಾ ವಾಹನದ ಚಾಲಕ ಅರುಣ್ ಕುಮಾರ್ ಕುಟುಂಬಕ್ಕೆ ಸರ್ಕಾರದಿಂದ ನೆರವು ನೀಡುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಅಧ್ಯಕ್ಷ ಕೆ.ಶಂಭುಲಿಂಗ ಅವರು ಭೇಟಿ ಮಾಡಿ ಮನವಿ ಅರ್ಪಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.
ಚಿತ್ರದುರ್ಗದ ಬಳಿ ಸಂಭವಿಸಿದ ಅಪಘಾತದಲ್ಲಿ ಅರುಣ್ ಕುಮಾರ್ ಅವರು ಮೃತಪಟ್ಟಿದ್ದು, ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಸಚಿವರಿಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯದಲ್ಲಿ ಗುರುತಿಸಿದ್ದು, ಅವರಿಗೆ ಸಾಧ್ಯವಿರುವ ಸೌಲಭ್ಯ ಕೊಡಲು ಸರ್ಕಾರ ಪ್ರಯತ್ನಿಸಲಿದೆ ಎಂದು ಸಚಿವರಾದ ಸಂತೋಷ ಲಾಡ್ ತಿಳಿಸಿದರು.
ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪತ್ರಿಕಾ ವಿತರಕ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರ ನೆರವಿಗೆ ಬಂದಿದ್ದನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಚಿವರಿಗೆ ವಿವರಿಸಿದರು.
ಮಾನವೀಯ ಸ್ಪಂದನೆ:
Arun Kumar is the Driver of the Newspaper Delivery Vehicle ಹಿರಿಯೂರಿನಲ್ಲಿರುವ ದಿ.ಅರುಣ್ ಕುಮಾರ್ ಅವರ ಮನೆಗೆ ಪತ್ರಿಕಾ ವಿತರಕರು ಸಂಗ್ರಹಿಸಿದ್ದ ಹಣವನ್ನು ತುರ್ತಾಗಿ ತಲುಪಿಸುವ ಕೆಲಸವನ್ನು ಮಾಡಲಾಗಿದರ ಎಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ತಿಳಿಸಿದ್ದಾರೆ.
