Monday, May 4, 2026
Monday, May 4, 2026

MLA Gopalakrishna Belur ಸಾಗರದಲ್ಲಿ ಮಳೆಯಿಂದಾಗಿ ಶಾಲಾ ಕಾಂಪೌಂಡ್ ನೆಲಸಮ: ಶಾಸಕರ ಭೇಟಿ

Date:

MLA Gopalakrishna Belur ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಪರೀತ ಮಳೆಯಿಂದ ನಗರಸಭಾ ವ್ಯಾಪ್ತಿಯ 25ನೇ ವಾರ್ಡಿನಲ್ಲಿ ಇರುವ ಅರಳಿಕಟ್ಟೆ ಸರ್ಕಾರಿ ಉರ್ದು ಶಾಲೆಯ ಮುಂಭಾಗದ ಕಾಂಪೌಂಡು ನೆಲಸಮವಾಗಿರುವ ಘಟನೆ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಭಾನುವಾರ ಸಾಗರ-ಹೂಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರು ಶಾಲೆಯ ಕಾಂಪೋಂಡ್ ಬಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂಪೋಂಡ್ ಕುಸಿದಿರುವ ಜೊತೆಗೆ ಕೊಠಡಿಗಳು ಸಹ ಶಿಥಿಲಾವಸ್ಥೆಯಲ್ಲಿದೆ. ಈ ಹಿನ್ನೆಲೆಯಲ್ಲಿ ನಗರಸಭೆಯಿಂದ ಕಾಂಪೋಂಡ್ ನಿರ್ಮಾಣ ಮಾಡಲು ತಿಳಿಸಲಾಗಿದೆ.

MLA Gopalakrishna Belur ಮಕ್ಕಳಿಗೆ ಶಿಕ್ಷಣಕ್ಕೆ ತೊಂದರೆಯಾಗದಂತೆ ಐದು ಕೊಠಡಿಗಳನ್ನು ತಾತ್ಕಾಲಿಕವಾಗಿ ರಿಪೇರಿ ಮಾಡಲು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಉರ್ದು ಶಾಲೆಯನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿಪಡಿಸಲಾಗುತ್ತದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...