DVS College of Arts and Science ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಜುಲೈ 13ರಂದು “ ಐನ್ ಸ್ಟೈನ್ ಸಾಪೇಕ್ಷತಾ ಸಿದ್ಧಾಂತದಲ್ಲಿ ಗಣಿತ ವಿಷಯದ ಅನ್ವಯಗಳು ” ಕುರಿತ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.
ಶಿವಮೊಗ್ಗ ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಜುಲೈ 13ರ ಬೆಳಗ್ಗೆ 11ಕ್ಕೆ ದೇಶಿಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಉದ್ಘಾಟಿಸುವರು.
ದೇಶಿಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್ ಉಪಸ್ಥಿತರುವರು.
DVS College of Arts and Science ಇರಾನ್ನ ಫ್ರೊಫೆಸರ್ ಡಾ. ಜೋಹ್ರೆ ನೆಕೋಯಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು. ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಐಕ್ಯೂಎಸಿ ಸಂಚಾಲಕ ಕುಮಾರಸ್ವಾಮಿ.ಎನ್, ಗಣಿತ ವಿಭಾಗದ ಮುಖ್ಯಸ್ಥ ಡಾ. ಕೆ.ಚಂದ್ರು ಹಾಜರಿರುವರು.