Tuesday, February 3, 2026
Tuesday, February 3, 2026

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಯೋಜನೆ ವ್ಯಾಪ್ತಿ ?

Date:

ಡಿಸೆಂಬರ್ 6ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮಹತ್ವದ ಚರ್ಚೆ ಆಗಲಿದೆ. ಈ ಯೋಜನೆಯನ್ನೂ ರಾಷ್ಟ್ರೀಯ ಯೋಜನೆಯನ್ನಾಗಿ ಘೊಷಿಸುವ ಪ್ರಸ್ತಾಪವಿದೆ. ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಜಲ ಶಕ್ತಿ, ಆರೋಗ್ಯ, ಕಾನೂನು ಸಚಿವರ ಭೇಟಿ ಬಳಿಕ ಮಾತನಾಡಿದ ಅವರು, ಗೋದಾವರಿ, ಕಾವೇರಿ, ಕೃಷ್ಣಾ ಮಹಾ ನದಿಗಳ ಜೋಡಣೆ ಬಗ್ಗೆ ರಾಜ್ಯದ ಅಹವಾಲನ್ನು ಕೇಳದೆ ಡಿಪಿಆರ್ ಮಾಡಬಾರದು ಹಾಗೂ ರಾಜ್ಯದ ನೀರಿನ ಪಾಲು ಎಷ್ಟು ಎಂಬುದು ನಿಗದಿ ಆಗುವವರೆಗೆ ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಬಾರದು ಎನ್ನುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಎರಡನೇ ನ್ಯಾಯಾಧಿಕರಣ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರಕಾರ ತನ್ನ ನಿಲುವನ್ನು ತಿಳಿಸಬೇಕು. ನ್ಯಾಯಾಧಿಕರಣ ಸಂಪೂರ್ಣ ವರದಿ ನಂತರ ಸುಪ್ರೀಂಕೋರ್ಟ್ ತೀರ್ಪಿನ ಪರಿಪಾಲನೆ ಆಗಬೇಕು ಎನ್ನುವ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...