Thursday, October 3, 2024
Thursday, October 3, 2024

ಹತ್ತನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ ಕಡಿತಗೊಂಡ ಪಠ್ಯ ಮಾಹಿತಿ

Date:

ಹತ್ತನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ ಕಡಿತಗೊಂಡ ಪಠ್ಯ ಮಾಹಿತಿ

ಕೋವಿಡ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ 2021 -22 ನೇ ಸಾಲಿಗೆ ಪರೀಕ್ಷೆಗೆ ಪರಿಗಣಿಸಬಹುದಾದ ಮತ್ತು ಪರಿಗಣಿಸಬಾರದ ಪಠ್ಯಗಳ ಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬಿಡುಗಡೆ ಮಾಡಿದೆ.
ಕಡಿತಗೊಳಿಸಿರುವ ಪಠ್ಯಗಳ ಮಾಹಿತಿ,

ಪ್ರಥಮ ಭಾಷೆ ಕನ್ನಡದಲ್ಲಿ ಎಂಟನೇ ಅಧ್ಯಾಯ ‘ಸುಕುಮಾರಸ್ವಾಮಿ ಕತೆ’ ಹಾಗೂ ‘ಕೆಮ್ಮನೆ ಮೀಸೆವೊತ್ತೋನೆ’ ಪದ್ಯವನ್ನು ಬೋಧನೆಯಿಂದ ಕೈಬಿಡಲಾಗಿದೆ. ಇಂಗ್ಲಿಷ್ ನಲ್ಲಿ ಡಿಸ್ಕವರಿ, ಸೈನ್ಸ್ ಅಂಡ್ ಹೋಪ್ ಆಫ್ ಸರ್ವೈವಲ್, ದಿ ಬರ್ಡ್ ಆಫ್ ಹ್ಯಾಪಿನೆಸ್, ಎಂಬ ಪಾಠಗಳು ಹಾಗೂ ನೆಟ್ ಆಫ್ ದಿ ಟೆಂಪೆಸ್ಟ್, ಆಫ್ ಟು ಔಟರ್ ಸ್ಪೇಸ್ ಟುಮಾರೋ ಮಾರ್ನಿಂಗ್, ಎಂಬ ಪದ್ಯಗಳನ್ನು ಬೋಧನೆಗೆ ಪರಿಗಣಿಸಿಲ್ಲ.
8ನೇ ತರಗತಿಯಲ್ಲಿ ಈಗಾಗಲೇ ಅಧ್ಯಯನ ಮಾಡಿದ್ದು, ಅದರ ಮುಂದುವರಿಕೆ ಭಾಗವಾಗಿರುವ ಹಿಂದಿ ಭಾಷೆಯ ದುನಿಯಾ ಮೇ ಪಹಲಾ ಮಕಾನ್, ರೋಬೋಟ್, ಹಾಗೂ ಬಾಲ್ ಶಕಿತ್, ಪಠ್ಯಗಳನ್ನು ಬೋಧಿಸದಂತೆ ಸೂಚಿಸಲಾಗಿದೆ.
ಗಣಿತ ವಿಷಯದ 8ನೇ ಅಧ್ಯಾಯ ವಾಸ್ತವ ಸಂಖ್ಯೆಗಳು, 9ನೇ ಅಧ್ಯಾಯ ಬಹು ಪದೋಕ್ತಿಗಳು, ಹಾಗೂ ಸಂಭವನೀಯತೆ, ಎಂಬ 14ನೇ ಅಧ್ಯಾಯವನ್ನು ಬೋಧನೆ ಮಾಡಬಾರದು. ಸಮಾಜ ವಿಜ್ಞಾನ ಇತಿಹಾಸದಲ್ಲಿ ಹತ್ತನೇ ಅಧ್ಯಾಯ 20ನೇ ಶತಮಾನದ ರಾಜಕೀಯ ಆಯಾಮಗಳು, ರಾಜ್ಯಶಾಸ್ತ್ರದ ಐದನೇ ಅಧ್ಯಾಯ ಜಾಗತಿಕ ಸಂಸ್ಥೆಗಳು, ಸಮಾಜಶಾಸ್ತ್ರದ 4ನೇ ಅಧ್ಯಾಯ ಸಾಮಾಜಿಕ ಸಮಸ್ಯೆಗಳು, ಅನ್ನು ಬೋಧನೆ ಪರಿಗಣಿಸದಂತೆ ತಿಳಿಸಲಾಗಿದೆ.
ಇದರಂತೆ ವಿಜ್ಞಾನ ವಿಷಯದಲ್ಲಿ ಮೂರನೇ ಅಧ್ಯಾಯ ಲೋಹಗಳು ಮತ್ತು ಅಲೋಹಗಳು, 4ನೇ ಅಧ್ಯಾಯ ಕಾರ್ಬನ್ ಮತ್ತು ಅದರ ಸಂಯುಕ್ತ ಗಳು, 8ನೇ ಅಧ್ಯಾಯ ಜೀವಿಗಳು ಹೇಗೆ ಸಂತಾನೋತ್ಪತ್ತಿ ನಡೆಸುತ್ತವೆ, ಮಾನವನ ಕಣ್ಣು ಮತ್ತು ವರ್ಣಮಯ ಜಗತ್ತು, ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ, ಎಂಬ ಪಾಠಗಳನ್ನು ಕೈಬಿಡಲಾಗಿದೆ.
ಸರಕಾರ ಈ ಹಿಂದೆ ಆದೇಶಿಸಿ ದಂತೆ, ಶೇಕಡ 20ರಷ್ಟು ಪಠ್ಯಕ್ರಮ ಕಡಿತಗೊಳಿಸಿರುವ ಡಿಎಸ್ಇಆರ್ ಟಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕಿರುವ ಉಳಿದ ಶೇಕಡಾ 80ರಷ್ಟು ಪಠ್ಯಗಳ ಬಗ್ಗೆ ವಿವರಗಳನ್ನು ಪ್ರಕಟಿಸಿದೆ. ಮುಖ್ಯವಾಗಿ ಡಿಸೆಂಬರ್ ನಿಂದ ಮಾರ್ಚ್ ಅವಧಿಯೊಳಗೆ ಬೋಧನೆ ಮಾಡಬೇಕಿದ್ದ ಪಾಠಗಳನ್ನು ಕಡಿತ ಮಾಡಲಾಗಿದೆ.
ಕಡಿತ ಮಾಡಿರುವ ಪಠ್ಯಗಳ ಮಾಹಿತಿಯನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ನೋಡಬಹುದು http://dsert.kar.nic.in

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...