Thursday, February 5, 2026
Thursday, February 5, 2026

ಕಗ್ಗಂಟ್ಟಾಗಿರುವ ಪದವೀಧರ ಶಿಕ್ಷಕರ ವರ್ಗಾವಣೆ

Date:

ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮತ್ತೆ ಗೊಂದಲ ಮುಂದುವರೆದಿದೆ. 6ರಿಂದ 8ನೇ ತರಗತಿ ಬೋಧನೆ ಮಾಡುವ ಪದವೀಧರ ಶಿಕ್ಷಕರನ್ನು (ಜಿಪಿಟಿ) ವರ್ಗಾವಣೆಗೆ ಪರಿಗಣಿಸದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕಳೆದ ಎರಡು ವರ್ಷಗಳಿಂದ ಹಲವು ತೊಂದರೆಗಳ ನಡುವೆ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಕುಂಟುತ್ತ ಸಾಗಿವೆ. ತಾಲೂಕುವಾರು ಮಂಜೂರಾದ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ ಘಟಕದ ಒಳಗೆ ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿತ್ತು.
ನವೆಂಬರ್ 23ರಂದು ಸ್ಥಗಿತಗೊಳಿಸಲಾಗಿದ್ದ ವರ್ಗಾವಣೆ ಪ್ರಕ್ರಿಯೆಗಳನ್ನು ನವೆಂಬರ್ 29 ರಿಂದ ಆರಂಭಿಸಲಾಗಿದೆ. 2015 – 16ನೇ ಸಾಲಿನಲ್ಲಿ ನೇಮಕಾತಿಗೊಂಡ ಸಾವಿರಾರು ಪದವೀಧರ ಶಿಕ್ಷಕರು ನಿಯಮಗಳನ್ವಯ ಈಗಾಗಲೇ ಐದು ವರ್ಷ ಸೇವಾವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹತೆ ಪಡೆದಿದ್ದಾರೆ. ಆದರೆ ಹುದ್ದೆಗಳು ಲಭ್ಯವಿದ್ದರೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಜಿಪಿಟಿ ಶಿಕ್ಷಕರನ್ನು ಪರಿಗಣಿಸಿದೆ ಇರುವುದರಿಂದ ತೀವ್ರ ಆಕ್ಷೇಪ ಕೇಳಿ ಬಂದಿದೆ.
ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ವರ್ಗಾವಣೆ ಮಾಡುತ್ತಿರುವುದು ಕಂಡುಬಂದಿದೆ.
ಜಿಪಿಟಿ ಶಿಕ್ಷಕರನ್ನು ಈ ವರ್ಷ ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ. ಈ ಹಿಂದೆಯೇ ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಮುಂದಿನ ವರ್ಗಾವಣೆ ವೇಳೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ಆರ್. ವಿಶಾಲ್ ಅವರು ತಿಳಿಸಿದ್ದಾರೆ.
ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ 1ರಿಂದ 5ನೇ ತರಗತಿಗೆ ಬೋಧನೆ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ( ಪಿಎಸ್ ಟಿ) ಮುಚ್ಚಳಿಕೆ ಬರೆಸಿಕೊಂಡು, ವರ್ಗಾವಣೆ ನಡೆಸುತ್ತಿರುವುದರ ಸಾರ್ವಜನಿಕ ಶಿಕ್ಷಣ ಇಲಾಖೆ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಪದವೀಧರ ಶಿಕ್ಷಕರು ತೀರ್ಮಾನಿಸಿದ್ದಾರೆ. ಇದರಿಂದ ವರ್ಗಾವಣೆ ಪ್ರಕ್ರಿಯೆಗಳಿಗೆ ಮತ್ತೆ ವಿಘ್ನ ಎದುರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...