Monday, December 15, 2025
Monday, December 15, 2025

Shivamogga Airport ಬೆಂಗಳೂರು to ಶಿವಮೊಗ್ಗ.ವಿಮಾನದಲ್ಲಿ ಆಗಮಿಸಲಿರುವ ಮೊದಲ ಸಚಿವ ಎಂ.ಬಿ.ಪಾಟೀಲ್

Date:

Shivamogga Airport ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು.

ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ವೇಳೆ ನೀಡಿರುವ ಅಂಶಗಳು ಹಾಗೂ ಹೆಚ್ಚುವರಿ ಸೌಕರ್ಯಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.

78 ಆಸನ ವ್ಯವಸ್ಥೆಯುಳ್ಳ ಎಟಿಆರ್-72 ಇಂಡಿಗೋ ವಿಮಾನ ಆ.11 ರಂದು ಕಾರ್ಯಾಚರಣೆ ನಡೆಸಲಿದ್ದು, ಅವರು ಅಬ್ಸರ್ವೇಷನ್ ನಲ್ಲಿ ಕೇಳಿರುವ ಸೌಕರ್ಯಗಳ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಿಡಬ್ಲ್ಯುಡಿ ಅಧಿಕಾರಿಗಳು ಮತ್ತು ವಿಮಾಣ ನಿಲ್ದಾಣ ನಿರ್ದೇಶಕರಿಗೆ ಸೂಚಿಸಿದರು.

ಹಾಗೂ ವಿಮಾನ ನಿಲ್ದಾಣದ ಅಧಿಕೃತ ವೆಬ್‍ಸೈಟ್ ನ್ನು ಅಭಿವೃದ್ದಿಪಡಿಸಿ ಅಂದು ಗಣ್ಯರಿಂದ ಲೋಕಾರ್ಪಣೆ ಮಾಡಿಸಬೇಕು. ಗಣ್ಯರ ಸ್ವಾಗತ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕೆ ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು.

ವಿಮಾನ ನಿಲ್ದಾಣಕ್ಕೆ ಅಗತ್ಯವಾದ ವಾಹನಗಳ ಸೌಕರ್ಯ, ಕಾಫಿ-ತಿಂಡಿ ಮಳಿಗೆಗಳು, ಅಗತ್ಯ ಆಂಬುಲೆನ್ಸ್ ಹಾಗೂ ಜಿಲ್ಲಾ ಪ್ರವಾಸೋದ್ಯಮಕ್ಕೆ ಒಂದು ಪ್ರತ್ಯೇಕ ಮಳಿಗೆಯನ್ನು ಸಿದ್ದಪಡಿಸುವಂತೆ ತಿಳಿಸಿದರು.

Shivamogga Airport ವಿಮಾನದ ನಿಲ್ದಾಣದ ಸುತ್ತಮುತ್ತ ನಿಯಮಾನುಸಾರ ಬಫರ್‍ಝೋನ್ ಅಧಿಸೂಚನೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು ಅಂದು ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ಸೇರಿದಂತೆ ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಎಲ್ಲ ಅಂಶಗಳ ಕುರಿತು ಸಮರ್ಪಕವಾಗಿ ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ದೇಶಕ ಕ್ಯಾಪ್ಟನ್ ಶಮಂತ್ ಮಾತನಾಡಿ, ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ.ಪಾಟೀಲ್ ರವರು ಆ.11 ರ ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಹೊರಟು ಬೆಳಿಗ್ಗೆ 11 ಕ್ಕೆ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಆಗಮಿಸುವರು. ಬೆಳಿಗ್ಗೆ 11.20 ಕ್ಕೆ ವಿಮಾನ ಪ್ರಯಾಣಿಕರೊಂದಿಗೆ ಶಿವಮೊಗ್ಗದಿಂದ ನಿರ್ಗಮಿಸಿ, ಮಧ್ಯಾಹ್ನ 12.15 ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಯೋಜನೆ ಇದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ(ಪ್ರಭಾರ) ಮೇಘನಾ ಆರ್, ಶಿವಮೊಗ್ಗ ಎಸಿ ರವಿಚಂದ್ರನ್‍ನಾಯಕ್, ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಸಂಪತ್‍ಕುಮಾರ್ ಪಿಂಗಳೆ, ಪೊಲೀಸ್ ಪಡೆ ಅಸಿಸ್ಟೆಂಟ್ ಕಮಾಂಡೆಂಟ್ ಚಂದ್ರಶೇಖರ್, ಕೆಎಸ್‍ಐಐಡಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು, ಗುತ್ತಿಗೆದಾರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...