Monday, February 2, 2026
Monday, February 2, 2026

Congress Karnataka ಫಲಾನುಭವಿಗಳು ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆಯುವ ವಿಧಾನ

Date:

Congress Karnataka ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ಈವರೆಗೆ 17 ಜಿಲ್ಲೆಗಳ 1.83 ಕೋಟಿಗೂ ಅಧಿಕ ಫಲಾನುಭವಿಗಳಿಗೆ 301 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಲಾಗಿದೆ.

https://ahara.kar.nic.in/status1/status_of_dbt.aspx ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ

1) ಆಹಾರ ಇಲಾಖೆಯ ವೆಬ್ ಸೈಟ್ ಗೆ ಲಾಗಿನ್ ಆಗಬೇಕು

2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.

3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ

4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.

Congress Karnataka 5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ
ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...