Sunday, December 7, 2025
Sunday, December 7, 2025

B. Y. Raghavendra ವಿಐಎಸ್ಎಲ್ ಮುಚ್ಚಲು‌ ಬಿಡುವುದಿಲ್ಲ-ಸಂಸದ ರಾಘವೇಂದ್ರ ಭರವಸೆ

Date:

B. Y. Raghavendra ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ಲೈವ್ ಫೋನ್ ಇನ್ ಕಾರ್ಯಕ್ರಮ ರೇಡಿಯೋ ಶಿವಮೊಗ್ಗದಲ್ಲಿ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮ ಸಂಯೋಜಕ ಅಜೇಯ ಸಿಂಹ ಕಾರ್ಯಕ್ರಮ ನಿರೂಪಿಸಿದರು. ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಉಪಸ್ಥಿತರಿದ್ದರು.

ತಮ್ಮ ಕಾರ್ಯಾವಧಿಯಲ್ಲಿ ಆದಂತಹ ಪ್ರಮುಖವಾದ ಕಾರ್ಯಗಳ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡ ಅವರು, ಕ್ಷೇತ್ರದ ದೃಷ್ಟಿಯಿಂದ ತಮ್ಮ ಕನಸುಗಳೇನು ಎಂಬುದರ ಬಗ್ಗೆಯೂ ವಿವರಣೆ ನೀಡಿದರು.

ಯಾವುದೇ ಕಾರಣಕ್ಕೂ ಭದ್ರಾವತಿಯ ವಿ ಐ ಎಸ್ ಎಲ್ ನ್ನು ಮುಚ್ಚಲು ಬಿಡುವುದಿಲ್ಲ ಎಂದು ಕೇಳುಗರಿಗೆ ಭರವಸೆ ನೀಡಿದರು.

ಶಿವಮೊಗ್ಗ ಶಿಕ್ಷಣ ಕಾಶಿ, ಪ್ರವಾಸೋದ್ಯಮ ಕಾಶಿಯಾಗಿ ಹೇಗೆ ಅಭಿವೃದ್ಧಿಯಾಗುತ್ತಿದೆ ಎಂಬುದನ್ನು ತಿಳಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಯ ಬೈಂದೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸರ್ ನಿಲ್ದಾಣ, ಶಿವಮೊಗ್ಗದ ಕೋಟೆ ಗಂಗೂರಿನ ರೈಲ್ವೇ ಡಿಪೋ, ಮುಂದೆ ಆಗಲಿರುವ ರೈಲ್ವೇ ಮಾರ್ಗಗಳು, ಯೋಜನೆಗಳು, ಪೂರ್ಣಗೊಳ್ಳುವ ಹಂತಕ್ಕೆ ಬಂದಿರುವ ಫ್ಲೈ ಓವರ್ ಇತ್ಯಾದಿ ವಿಚಾರಗಳ ಬಗ್ಗೆ ತಿಳಿಸಿದರು.

ಶಿವಾನಂದಪ್ಪ, ಮನೋಜ್ ಈಸೂರು, ಚಂದ್ರಶೇಖರ್ ಶೆಟ್ಟಿ ಹೊಸನಗರ, ವಿಜಯಾ ಗಣೇಶ್ ವಿನೋಬನಗರ, ಫಣೀಂದ್ರ ವಿನೋಬನಗರ, ಪವಿತ್ರಾ ಮೈಸೂರು, ಪ್ರೇಮಕುಮಾರ್ ರತ್ನಾಕರ ನಗರ, ಸೀತಾರಾಮ್ ಭದ್ರಾವತಿ, ರಾಕೇಶ್ ಚುರ್ಚಿಗುಂಡಿ, ಟಿ. ರಾಮಚಂದ್ರಪ್ಪ ವಿಠ್ಠಗೊಂಡನಕೊಪ್ಪ, ಸುರೇಶ್ ಭದ್ರಾವತಿ, ಯುವರಾಜ್ ಯಮ್ಮಿಗನೂರು, ಗಣೇಶ್ ಭದ್ರಾವತಿ, ತ್ರಿವೇಣಿ ಭದ್ರಾವತಿ, ಶ್ರೀಶೈಲೂ ಪದ್ಮನಾಭ ಅಥಣಿ, ಮನೋಜ್ ಭದ್ರಾವತಿ, ಕೃಷ್ಣಮೂರ್ತಿ ಶಿವಮೊಗ್ಗ ಕರೆ ಮಾಡಿ, ತಮ್ಮ ಅಹವಾಲುಗಳನ್ನು ತಿಳಿಸಿದರು.

B. Y. Raghavendra ಸಂಸ್ಥೆಯ ಪದಾಧಿಕಾರಿಗಳಾದ ಸಿ. ಎಸ್. ಚಂದ್ರಶೇಖರ್, ವಿಶ್ರಾಂತ ತಹಸೀಲ್ದಾರ್ ಚಂದ್ರಶೇಖರ್, ಪುಟ್ಟಪ್ಪ, ಹೂವಯ್ಯ ಗೌಡ, ನಿಲಯ ಸಂಯೋಜಕ ಗುರುಪ್ರಸಾದ್, ವಿಶ್ರಾಂತ ಮುಖ್ಯಶಿಕ್ಷಕಿ ವಿನೋದಾಕುಮಾರಿ, ಜೀವ ವೈವಿಧ್ಯ ಸಂಶೋಧಕ ಡಾ. ನಂದಾ ಅಪ್ಪಾಜಿ, ಸಂಶೋಧನಾ ಸಹಾಯಕಿ ರಾಧಾ, ಗ್ರಾಮ ಪಂಚಾಯ್ತಿ ಸದಸ್ಯ ಹರ್ಷ, ರೇಡಿಯೋ ಶಿವಮೊಗ್ಗದ ಆರ್ ಜೆಗಳು, ಸ್ಥಳೀಯ ನಿವಾಸಿಗಳು ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...