Monday, February 2, 2026
Monday, February 2, 2026

M. B. Patil ಕೋಲಾರ ಜಿಲ್ಲೆಯಲ್ಲಿ ಹೈಟೆಕ್ ಪಾರ್ಕ್ : ಜಪಾನಿ ಕಂಪನಿ ಜೊತೆ ಸಚಿವ ಪಾಟೀಲ್ ಚರ್ಚೆ

Date:

M. B. Patil ಕೋಲಾರ ಜಿಲ್ಲೆಯ ವೇಮಗಲ್‌ ಸಮೀಪದ ಬಾವನಹಳ್ಳಿಯಲ್ಲಿ ಗುರುತಿಸಲಾಗಿರುವ 720 ಎಕರೆ ಪ್ರದೇಶದಲ್ಲಿ ಹೈಟೆಕ್‌ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಆಸಕ್ತಿ ಹೊಂದಿರುವ ಜಪಾನಿನ ಮಾರುಬೇನಿ ಕಾರ್ಪೊರೇಷನ್‌ನ ಉನ್ನತ ಮಟ್ಟದ ನಿಯೋಗವು ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರೊಂದಿಗೆ ಮಂಗಳವಾರ ಚರ್ಚಿಸಿತು.

ಕಂಪನಿಯ ಅಹವಾಲು ಕೇಳಿಸಿಕೊಂಡ ಸಚಿವರು, “ಮಾರುಬೇನಿ ಕಾರ್ಪೊರೇಷನ್‌ ಪ್ರಸ್ತುತಪಡಿಸಿರುವ ಪ್ರಸ್ತಾವನೆ ಆಕರ್ಷಕವಾಗಿದೆ. ಇದನ್ನು ವಿವರವಾಗಿ ಅಧ್ಯಯನ ಮಾಡಿ, ಸರಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಭರವಸೆ ನೀಡಿದರು.

ಕಂಪನಿಯು ತನ್ನ ಪ್ರಾತ್ಯಕ್ಷಿಕೆ ತೋರಿಸಿ, ಉದ್ದೇಶಿತ ಹೈಟೆಕ್‌ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೆ ನೇರವಾಗಿ 2,800 ಕೋಟಿ ರೂ. ಹೂಡಿಕೆ ಮಾಡಲಾಗುವುದು. ನಂತರ ಅಲ್ಲಿನ ಕೈಗಾರಿಕಾ ನಿವೇಶನಗಳನ್ನು ಆಸಕ್ತ ಉದ್ದಿಮೆಗಳಿಗೆ ಹಂಚಲಾಗುವುದು. ಆ ಹಂತದಲ್ಲಿ ನೇರ ವಿದೇಶಿ ಹೂಡಿಕೆ ಮೂಲಕ ಇನ್ನೂ 8,000 ಕೋಟಿ ರೂ. ಇಲ್ಲಿಗೆ ಹರಿದು ಬರಲಿದೆ. ಜತೆಗೆ ಇಲ್ಲಿ 40 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಇದರಿಂದ ಒಟ್ಟಾರೆಯಾಗಿ ಕರ್ನಾಟಕದ ಆರ್ಥಿಕತೆಗೆ ವರ್ಷಕ್ಕೆ 2 ಬಿಲಿಯನ್‌ ಡಾಲರ್ ಸೇರ್ಪಡೆಯಾಗಲಿದೆ. ತಮ್ಮ ದೇಶದ (ಜಪಾನ್‌) ಆರ್ಥಿಕ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಈ ಉದ್ದೇಶಿತ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ಸಂಬಂಧಿಸಿದ ಕಾರ್ಯಸಾಧ್ಯತಾ ವರದಿಯನ್ನು ಅಂಗೀಕರಿಸಿದೆ ಎಂದು ವಿವರಿಸಿತು.

ಜಪಾನಿನ ರಾಜಧಾನಿ ಟೋಕಿಯೋದಲ್ಲಿ ಕೇಂದ್ರ ಕಚೇರಿ ಹೊಂದಿರುವ ಮಾರುಬೇನಿ ಕಾರ್ಪೊರೇಷನ್‌ ಈಗಾಗಲೇ ಚೀನಾ, ಫಿಲಿಪ್ಪೀನ್ಸ್, ಥಾಯ್ಲೆಂಡ್‌ಗಳಲ್ಲಿ ಇಂತಹ ಹೈಟೆಕ್‌ ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿ ಪಡಿಸಿದೆ. ಜೊತೆಗೆ ಇಂಡೋನೇಷ್ಯಾ, ಮ್ಯಾನ್ಮಾರ್, ವಿಯಟ್ನಾಂ ಮುಂತಾದ ದೇಶಗಳಲ್ಲಿ ಇಂತಹ ಕೈಗಾರಿಕಾ ಪ್ರದೇಶಗಳನ್ನು ಕಂಪನಿಯು ಅಭಿವೃದ್ಧಿ ಪಡಿಸುತ್ತಿದೆ ಎಂದು ನಿಯೋಗವು ಈ ಸಂದರ್ಭದಲ್ಲಿ ಮಾಹಿತಿ ನೀಡಿತು.

ಕಂಪನಿಯು ಮುಖ್ಯವಾಗಿ ಸಾಮಾಜಿಕ ಮೂಲಸೌಲಭ್ಯ, ಆರೋಗ್ಯ ಮತ್ತು ವೈದ್ಯಕೀಯ, ವೆಲ್‌ನೆಸ್‌ ತರಹದ ವಲಯಗಳಿಗೆ ಆದ್ಯತೆ ನೀಡುತ್ತದೆ. ಇವುಗಳ ಅಡಿಯಲ್ಲಿ ಡಿಜಿಟಲ್‌ ಸ್ಟ್ರಾಟೆಜಿ, ಇನ್ನೋವೇ‍ಶನ್‌ ಸ್ಟ್ರಾಟೆಜಿ, ಸ್ಮಾರ್ಟ್ ಸಿಟಿ, ಡಿಕಾರ್ಬನೈಸೇಶನ್‌, ಫಾರ್ಮಾ ಮುಂತಾದವನ್ನು ಗುರುತಿಸಲಾಗಿದೆ. ಅಲ್ಲದೆ, ಉದ್ದೇಶಿತ ಯೋಜನೆಯ ಸಂಬಂಧ ಕರ್ನಾಟಕ ರಾಜ್ಯ ಸರಕಾರ ಮತ್ತು ಕೆಐಎಡಿಬಿ ಜತೆ ನಿರಂತರವಾಗಿ ಚರ್ಚಿಸಲಾಗುತ್ತಿದೆ ಎಂದು ಅದು ಮನದಟ್ಟು ಮಾಡಿಕೊಟ್ಟಿತು.

M. B. Patil ಮಾರುಬೇನಿ ಕಾರ್ಪೊರೇಷನ್‌ ನ ಉಪ ಪ್ರಧಾನ ವ್ಯವಸ್ಥಾಪಕ ಶಿರೋಜೋನೊ ಕಾಜೌಕಿ, ಮಾರುಬೇನಿ ಇಂಡಿಯಾ ಲಿಮಿಟೆಡ್ ನ ಪ್ರಧಾನ ವ್ಯವಸ್ಥಾಪಕ ತಕಾಯಿಕಾ ಯೋಶಿದಾ ನೇತೃತ್ವದ ನಿಯೋಗ ಸಚಿವರನ್ನು ಭೇಟಿ ಮಾಡಿತು.

ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...