Thursday, March 19, 2026
Thursday, March 19, 2026

Kuvempu University ಕುವೆಂಪು ವಿವಿಯ ಪ್ರಾಣಿಶಾಸ್ತ್ರ ಸ್ನಾತಕೋತ್ತರ ಪರೀಕ್ಷೆ: ಕು.ಗಾಯತ್ರಿ & ಕು.ದೇವಿಕಾ ಅವರಿಗೆ ಪ್ರಥಮ ಮತ್ತು ದ್ವಿತೀಯ ಶ್ರೇಣಿ

Date:

Kuvempu University ಶಿವಮೊಗ್ಗದ ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಕುವೆಂಪು ವಿಶ್ವವಿದ್ಯಾಲಯವು ನಡೆಸಿದ ಎಂ.ಎಸ್ಸಿ ಮನ:ಶಾಸ್ತçದ ವಿಭಾಗದ ಸ್ನಾತಕೋತ್ತರ ಪದವಿಯ ಪರೀಕ್ಷೆಗಳಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರಾದ ಕು. ಗಾಯತ್ರಿ ವಿ ಇವರು ಪ್ರಥಮ ರ‍್ಯಾಂಕ್ ಹಾಗೂ ದೇವಿಕಾ ಎಂ ಇವರು ಎರಡನೇ ರ‍್ಯಾಂಕ್ ಗಳಿಸಿರುತ್ತಾರೆ.

ಜುಲೈ 22 ರಂದು ನಡೆಯಲಿರುವ ವಿಶ್ವವಿದ್ಯಾನಿಲಯದ 33ನೇ ಘಟಿಕೋತ್ಸವದಲ್ಲಿ ಕು. ಗಾಯತ್ರಿ ವಿ. ರವರು ಪ್ರಥಮ ರ‍್ಯಾಂಕಿನ ಪ್ರಶಸ್ತಿ ಪತ್ರವನ್ನು ಪಡೆಯಲಿದ್ದಾರೆ.

ಕಾಲೇಜಿನ ಸ್ನಾತಕೋತ್ತರ ಮನ:ಶಾಸ್ತçದ ಮೊದಲ ಬ್ಯಾಚ್‌ನಲ್ಲಿಯೇ ಶೇ.100 ಫಲಿತಾಂಶ ಹಾಗೂ ಎರಡು ರ‍್ಯಾಂಕ್‌ಗಳು ಲಭ್ಯವಾಗಿರುವುದು ಹೆಮ್ಮೆಯಾಗಿದೆ ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.

ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಮನ:ಶಾಸ್ತ್ರ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಮಾನಸ ಆಸ್ಪತ್ರೆಯ ಮೂಲಕ ಕ್ಲಿನಿಕಲ್ ಹಾಗೂ ಕೌನ್ಸಲಿಂಗ್ ಕೌಶಲ್ಯಗಳು, ಮನ:ಶಾಸ್ತçದ ಸಂಶೋಧನಾ ಕೌಶಲ್ಯಗಳ ನೇರ ತರಬೇತಿ ಸಿಗುತ್ತದೆ.

ಆದುದರಿಂದ ಈ ಕಾಲೇಜಿನಲ್ಲಿ ಸ್ನಾತಕೋತ್ತರ Psychology ಪೂರೈಸಿದ ಎಲ್ಲಾ ವಿದ್ಯಾರ್ಥಿಗಳಿಗೂ ನೇರವಾಗಿ ಉದ್ಯೋಗ ದೊರೆತಿದೆ.
ಇದೊಂದು ಅತ್ಯುತ್ತಮ ಶೈಕ್ಷಣಿಕ ಸಾಧನೆ ಎಂದು ಮಾನಸ ಟ್ರಸ್ಟ್ನ ನಿರ್ದೇಶಕರಾದ ಡಾ. ರಜನಿ ಎ. ಪೈ ರವರು ಶ್ಲಾಘಿಸಿದರು.

Kuvempu University ರ‍್ಯಾಂಕ್ ಪಡೆದ ಎಲ್ಲ ವಿದ್ಯಾರ್ಥಿನಿಯರನ್ನು ಮಾನಸ ಟ್ರಸ್ಟ್ನ ಡಾ. ರಜನಿ ಎ. ಪೈ, ಡಾ. ಪ್ರೀತಿ ವಿ. ಶಾನ್‌ಭಾಗ್, ಡಾ. ವಾಮನ್ ಶಾನ್‌ಭಾಗ್, ಸಿಸ್ಟರ್ ಮಾರೀ ಇವ್ಲಿನ್, ಡಾ. ರಾಜೇಂದ್ರ ಚೆನ್ನಿ, ಡಾ. ಅರ್ಚನಾ ಭಟ್ ಕೆ., ಹಾಗೂ ಪ್ರಾಂಶುಪಾಲರಾದ ಡಾ. ಸಂಧ್ಯಾಕಾವೇರಿ ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...