Friday, June 26, 2026
Friday, June 26, 2026

ಆತಂಕಕ್ಕೊಳಗಾಗಬೇಡಿ -ಡಾ. ಸುಧಾಕರ್

Date:

ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಬೆಂಗಳೂರಿನ ಮೂಲಕ ಭಾರತಕ್ಕೂ ಲಗ್ಗೆ ಇಟ್ಟಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ 46 ವರ್ಷದ ವೈದ್ಯರೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜೆಪಿ ನಗರದಲ್ಲಿ ವಾಸವಿರುವ ಸೋಂಕಿತರ ಸಂಪರ್ಕದಲ್ಲಿದ್ದ ಪತ್ನಿ ಸೇರಿ ಐದು ಮಂದಿಗೆ ಕೊರೊನಾ ಸೋಂಕು ತಲುಪಿದೆ. ಇವರೆಲ್ಲರೂ ಕೂಡ ವೈದ್ಯರಾಗಿದ್ದಾರೆ. ಮನೆಯಲ್ಲಿ ಪ್ರತ್ಯೇಕ ತಾರೀಕಿಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸೋಂಕಿತ ವೈದ್ಯ ಹಾಗೂ ಇತರೆ ಇಬ್ಬರೂ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವೈದ್ಯರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದರು. ಇವರು ಯಾವುದೇ ಪ್ರಯಾಣ ಇತಿಹಾಸ ಹೊಂದಿರಲಿಲ್ಲ. ಆದರೂ ಸೋಂಕು ಹೇಗೆ ತಲುಪಿತು ಎಂಬುದು ನಿಗೂಢವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...