Wednesday, October 2, 2024
Wednesday, October 2, 2024

ಪರಸ್ಪರ ಪ್ರೀತಿಯೇ ಮಾನವ ಧರ್ಮ.- ಗೆಹ್ಲೋಟ್

Date:

ಧರ್ಮದ ಹಾದಿಯಲ್ಲಿ ಸಾಕುವವನ ಹೃದಯ ನಿರ್ಮಲವಾಗಿರುತ್ತದೆ. ಆತನಲ್ಲಿ ಕರುಣೆ ಮತ್ತು ಕ್ಷಮಾ ಗುಣವಿರುತ್ತದೆ. ಮಾನವರು ಪರಸ್ಪರ ಪ್ರೀತಿಸುವಲ್ಲಿ ಧರ್ಮವಾಗಿರುತ್ತದೆ ಮತ್ತು ಅಂತಹ ಗುಣವು ಇತರರ ದುಃಖವನ್ನು ಕಳೆಯುತ್ತದೆ. ಇಂದಿನ ದಿನಗಳಲ್ಲಿ ಸರ್ವಧರ್ಮ ಸಮನ್ವಯ ಮತ್ತು ಸಮ್ಮೇಳನದ ತುರ್ತು ಇದ್ದೇ ಇದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹೇಳಿದ್ದಾರೆ.
ಧರ್ಮಸ್ಥಳ ಕ್ಷೇತ್ರದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 89 ನೇ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಕ್ಷೇತ್ರ ಧರ್ಮದ ನಿವಾಸವೇ ಆಗಿದೆ. ಮಾನವತೆಯ ಸ್ಥಾನವಾಗಿದೆ. ಈ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಬೇಕೆಂಬ ನನ್ನ ಬಹುಕಾಲದ ಕನಸು ಇಂದು ಈಡೇರಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಎಸ್‌. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಅವರು, ದೇಹ, ಭೌತಿಕತೆ, ಇಂದ್ರಿಯ ಲೋಲುಪತೆಯನ್ನು ಮೀರಿದ್ದೇ ಧರ್ಮ. ಈ ಹೆಸರನ್ನಿಟ್ಟುಕೊಂಡು ಮತಪಂಥಗಳ ಹೊಂಡ ತೋಡಿ ಕೊಂಡರೆ ಅದು ಧರ್ಮ ವಾಗುವುದಿಲ್ಲ ಎಂದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ‌. ವೀರೇಂದ್ರ ಹೆಗ್ಗಡೆಯವರು ಅತಿಥಿಗಳನ್ನು ಸ್ವಾಗತಿಸಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...