Wednesday, March 12, 2025
Wednesday, March 12, 2025

ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಮೈಯೆಲ್ಲ ಕಣ್ಣು.

Date:

ಇನ್ಮುಂದೆ ಶಿವಮೊಗ್ಗ ಜಿಲ್ಲೆಗೆ ಬರುವ ಮತ್ತು ಹೋಗುವ ಪ್ರತಿಯೊಂದು ವಾಹನದ ಮೇಲೆ ಕ್ಯಾಮರಾ ಕಣ್ಣಿಡಲಿದೆ.
ವೇಗವಾಗಿ ವಾಹನ ಚಲಾಯಿಸುವುದು ಸೇರಿ ಇನ್ಯಾವುದೇ ರೀತಿಯ ಅಪರಾಧ ಚಟುವಟಿಕೆಗಳು ನಡೆದಲ್ಲಿ ಅಂಥವುಗಳ ವಿವರವನ್ನು ವಾಹನದ ಸಂಪೂರ್ಣ ವಿವರ ಸಹಿತ ಪೊಲೀಸರು ಪಡೆಯಬಹುದಾಗಿದೆ.
ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಟ್ರಾಫಿಕ್ ನಿಯಮಗಳನ್ನು ಸ್ಮಾರ್ಟ್ ಆಗಿಸುವುದಕ್ಕಾಗಿ ಹಲವು ಯೋಜನೆಗಳನ್ನು ಹೊಂದಲಾಗಿದೆ. ಈಗಾಗಲೇ ಹಲವೆಡೆ ಕ್ಯಾಮೆರಾ ಅಳವಡಿಸಿದ್ದು, ಇವುಗಳ ಮೂಲಕ ನಗರದ ಪ್ರತಿಯೊಂದು ಚಟುವಟಿಕೆಗಳ ಮೇಲೆ ಕಣ್ಣಿಡಬಹುದಾಗಿದೆ. ಜೊತೆಗೆ ಸ್ಮಾರ್ಟ್ ಫೋಲ್ ಗಳನ್ನು ಅಳವಡಿಸಿದ್ದು, ಇದರಲ್ಲಿ ಕ್ಯಾಮೆರಾ, ಪಬ್ಲಿಕ್ ಅನ್ನೌನ್ಸ್ಮೆಂಟ್, ಪರದೆ, ವಾತಾವರಣ ಮೌಲ್ಯಮಾಪನ ಹೀಗೆ ಹಲವು ವ್ಯವಸ್ಥೆಗಳನ್ನು ತಲುಪಿಸಲಾಗಿದೆ ಎಂದು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಂಡಿ ಚಿದಾನಂದ್ ವಟಾರೆ ಅವರು ತಿಳಿಸಿದ್ದಾರೆ.
ಈ ವ್ಯವಸ್ಥೆ ಶಿವಮೊಗ್ಗದಲ್ಲಿ ಆರಂಭಿಸುವುದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೋಸ್ಕರ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 41.83 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ.
ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅಡಿ ಶಿವಮೊಗ್ಗ ನಗರಕ್ಕೆ ಬರುವ ಮತ್ತು ಹೊರಹೋಗುವ 9 ಪಾಯಿಂಟ್ ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವ್ಯವಸ್ಥೆ ರೂಪಿಸಿದ್ದು ಪೊಲೀಸ್ ಇಲಾಖೆಗೆ ಇದರಿಂದ ಭಾರಿ ಪ್ರಯೋಜನವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tarunodaya Shivamogga ನಿಸರ್ಗದಾನಂದ ಸವಿಯ ಬೇಕೆಂದರೆ ಚಾರಣ ಹೋಗಲೇ ಬೇಕು- ಜಿ.ವಿಜಯ ಕುಮಾರ್

Tarunodaya Shivamogga ಜರಿ, ತೊರೆ, ಹಕ್ಕಿ ಪಕ್ಷಿಗಳ ಕಲರವ, ಪ್ರಕೃತಿ...

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...