Saturday, December 6, 2025
Saturday, December 6, 2025

Manipur Incident ಮಣಿಪುರದಲ್ಲಿ ಮಹಿಳೆ ಅಪಮಾನ ಪ್ರಸಂಗ: ಆರೋಪಿಗಳಿಗೆ ಮರಣ ದಂಡನೆ ಕೊಡಲು ಆಗ್ರಹ

Date:

Manipur Incident ಮಣಿಪುರ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವ ಆರೋಪಿಗಳಿಗೆ ಮರಣ ದಂಡನೆ ವಿಧಿಸುವ ಮೂಲಕ ನಿರ್ದಾಕ್ಷ್ಯೀಣ ಕ್ರಮ ಕೈಗೊ ಳ್ಳಬೇಕು ಎಂದು ಜಿಲ್ಲಾ ಅಂಬೇಡ್ಕರ್ ಸೇನೆ ಬುಧವಾರ ರಾಷ್ಟ್ರಪತಿಗಳನ್ನು ಒತ್ತಾಯಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ ಸೇನೆಯ ಪದಾಧಿಕಾರಿಗಳು ಹೆಣ್ಣುಮಕ್ಕಳ ಮೇಲೆ ಅಮಾನುಷಕೃತ್ಯವೆಸಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಮತ್ತೊಮ್ಮೆ ಇಂತಹ ದುರ್ಘಟನೆಗೆ ಯಾರು ಕೈಹಾಕದಂತೆ ಕ್ರಮ ವಹಿಸಬೇಕು ಎಂದರು.

ಈ ವೇಳೆ ಮಾತನಾಡಿದ ಸೇನೆಯ ಜಿಲ್ಲಾಧ್ಯಕ್ಷ ಸಂತೋಷ್ ಮಣ ಪುರದ ರಾಜ್ಯದ ಬುಡಕಟ್ಟು ಸಮುದಾ ಯದ ಇಬ್ಬರು ಮಹಿಳೆಯರನ್ನು ಬಹಿರಂಗವಾಗಿ ವಿವಸ್ತçಗೊಳಿಸಿ ಲೈಂಗಿಕ ಕಿರುಕುಳ ನೀಡಿರುವುದು ದುರಾದೃಷ್ಟಕರ ಸಂಗತಿ. ಇಂತಹ ವಿಕೃತ ಮನಸ್ಸು ಹೊಂದಿರುವ ಆರೋಪಿಗಳಿಗೆ ಯಾವುದೇ ದಯೆ ತೋರದೇ ಮರಣ ದಂಡನೆ ನೀಡಿ ಮಹಿಳೆಯರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕು ಎಂದರು.

Manipur Incident ದೇಶದ ಹೆಣ್ಣುಮಕ್ಕಳ ಮೇಲೆ ಇಷ್ಟೆಲ್ಲಾ ಪೈಶಾಚಿಕ ಕೃತ್ಯಗಳು ನಡೆದರೂ ಸಹ ಮಣ ಪುರ ರಾಜ್ಯಸರ್ಕಾರ ವೀಡಿಯೋ ವೈರಲ್ ಆದ ಬಳಿಕ ಕ್ರಮ ಕೈಗೊಂಡಿರುವುದು ದುರ್ದೈವದ ವಿಷಯ. ಕೂಡಲೇ ರಾಷ್ಟ್ರಪತಿಗಳಿಗೆ ಅಲ್ಲಿನ ರಾಜ್ಯಸರ್ಕಾರದ ವಿಸರ್ಜಿಸಬೇಕು ಎಂದರು.

ಸಂತ್ರಸ್ಥ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಧನ, 10 ಎಕರೆ ಭೂಮಿ ಮಂಜೂರು ಮಾಡಬೇಕು. ಮಣ ಪುರದ ರಾಜ್ಯಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸೇನೆಯ ಕಾರ್ಯದರ್ಶಿಗಳಾದ ಬಸವರಾಜ್, ಸುರೇಶ್, ದಲಿತ ಮುಖಂಡರುಗಳಾದ ಜಗದೀಶ್, ಪ್ರೇಮ್‌ಕುಮಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...