Saturday, December 6, 2025
Saturday, December 6, 2025

BJP Shivamogga ಶಿವಮೊಗ್ಗದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮೇಳನ

Date:

BJP Shivamogga ಪ್ರಧಾನ ಮಂತ್ರಿ ಕಿಸಾನ್ ಸಮ್ಮೇಳನ ಇಂದು ದಿನಾಂಕ 27.07.23 ಗುರುವಾರ ಬೆಳಗ್ಗೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ಭಾ.ಕೃ. ಅ. ಪ ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರ ಸಹಯೋಗದಲ್ಲಿ ಪ್ರದಾನ ಮಂತ್ರಿ ಕಿಸಾನ್ ಸಮ್ಮೇಳನ ದ ವರ್ಚವಲ್ ಸಭೆಯು ಕೃಷಿ ವಿಜ್ಞಾನ ಕಾಲೇಜು ಶಿವಮೊಗ್ಗದಲ್ಲಿ ನಡೆಯಿತು..

ಕೇಂದ್ರ ಸರಕಾರವು ದೇಶದಲ್ಲಿ 1.25 ಲಕ್ಷ ಹೊಸ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ರೈತರನ್ನು ಸಬಲೀಕರಣಗೊಳಿಸುತ್ತಿದ್ದಾರೆ. ದೇಶದಲ್ಲಿ 2.8 ಲಕ್ಷಕ್ಕೂ ಹೆಚ್ಚು ರಸಗೊಬ್ಬರ ಅಂಗಡಿಗಳನ್ನು ತೆರೆಯಲಾಗಿದೆ.. ಇಂದು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯ 14ನೇ ಕಂತಿನ ಹಣವನ್ನು ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಿದ್ದಾರೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಒಟ್ಟು 8.1 ಕೋಟಿ ರೈತರು ವಾರ್ಷಿಕ 6 ಸಾವಿರ ರೂಪಾಯಿ ಪಡೆಯುತ್ತಿದ್ದಾರೆ.

BJP Shivamogga ಯೂರಿಯ ಗೋಲ್ಡ್ – ಸುಲಫರ್ ಲೇಪಿತ ಗೊಬ್ಬರ ಬಿಡುಗಡೆ* ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಅರುಣ್ ಡಿ ಎಸ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಿವರಾಜ್ ಜಿಲ್ಲಾ ಕಾರ್ಯದರ್ಶಿ ಎನ್ ಡಿ ಸತೀಶ್ ಗ್ರಾಮಾಂತರ ಅಧ್ಯಕ್ಷರಾದ ರತ್ನಾಕರ್ ಶೆಣೈ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಸಾಲೇಕೊಪ್ಪ ರಾಮಚಂದ್ರ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ವೀರೂಪಾಕ್ಷಪ್ಪ , ರೈತ ಮೋರ್ಚಾ ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ವಿನ್ಸ್oಟ್ ರೋಡ್ರಿಗಸ್, ಕೃಷ್ಣನೋಜಿ ರಾವ್ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು, ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದರು.

BJP Shivamogga
BJP Shivamogga

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...