Thursday, June 18, 2026
Thursday, June 18, 2026

Dr. Selvamani ಆಗಸ್ಟ್ 1 ರಿಂದ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ಜಾರಿ- ಡಾ.ಸೆಲ್ವಮಣಿ

Date:

Dr. Selvamani  ಆಡಳಿತದಲ್ಲಿ ದಕ್ಷತೆ, ಸ್ಥಿರತೆ ಮತ್ತು ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಗಸ್ಟ್ 1 ರಿಂದ ಅನ್ವಯಗೊಳ್ಳುವಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ,  ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸೇರಿದಂತೆ ಜಿಲ್ಲೆಯ  11 ಸ್ಥಳೀಯ ಸಂಸ್ಥೆಗಳಿಗೆ ಅನುಕುಲವಾಗುವಂತೆ ವಿನ್ಯಾಸಗೊಳಿಸಿದ ಇ-ಆಡಳಿತ ತಂತ್ರಾoಶವನ್ನು ಉದ್ಘಾಟಿಸಿದ ನಂತರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಫೀಸ್ ವ್ಯವಸ್ಥೆ ಅನುಷ್ಠಾನಗೊಳ್ಳುತ್ತಿರುವ ರಾಜ್ಯದ ಮೊದಲ ಜಿಲ್ಲೆ ಇದಾಗಿದೆ. ಸಾರ್ವಜನಿಕರ ಅಮೂಲ್ಯ ಸಮಯವನ್ನು ಉಳಿಸುವುದಲ್ಲದೆ ಅವರ ಬೇಡಿಕೆಗಳಿಗನುಗುಣವಾಗಿ ಕಾರ್ಯನಿರ್ವಹಿಸಲು ಇ-ತಂತ್ರಾoಶ ಸಹಕಾರಿಯಾಗಲಿದೆ. ಕಡತಗಳ ಅನಗತ್ಯ ವಿಳಂಬವನ್ನು ತಪ್ಪಿಸಿ, ಆಡಳಿತದಲ್ಲಿ ಗುಣಮಟ್ಟವನ್ನು ಸುಧಾರಿಸುವಲ್ಲಿ, ಪಾರದರ್ಶಕತೆ ಕಂಡುಕೊoಡು ಅಧಿಕಾರಿಗಳಿಗೆ ಹೊಣೆಗಾರಿಕೆಯನ್ನು ಸ್ಥಾಪಿಸಿ, ರಚನಾತ್ಮಕವಾಗಿ ಕಾರ್ಯನಿರ್ವಹಿಸುವಲ್ಲಿ ಸಹಕಾರಿಯಾಗಲಿದೆ. ಎಲ್ಲಾ ಅಧಿಕಾರಿಗಳು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತವನ್ನು ವೇಗಗೊಳಿಸುವ ಮಹತ್ವದ ಉದ್ಧೇಶದೊಂದಿಗೆ ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ ಎಂದ ಅವರು, ಇ-ಆಫೀಸ್ ಕಚೇರಿ ವ್ಯವಸ್ಥೆಯು ಸರಳೀಕೃತ, ಸ್ಪಂದಿಸುವ, ಪರಿಣಾಮಕಾರಿ, ಜವಾಭ್ದಾರಿಯುತ ಮತ್ತು ಪಾರದರ್ಶಕ ಕೆಲಸವನ್ನು ಸಾಧಿಸುವ ಮಾಧ್ಯಮವಾಗಿದೆ. ಇ-ಆಫೀಸ್‌ನ ವೇಗ ಮತ್ತು ದಕ್ಷತೆಯು ಇಲಾಖೆಗಳಿಗೆ ತಿಳುವಳಿಕೆಯುಳ್ಳ ಮತ್ತು ಕ್ಷಿಪ್ರ ನಿರ್ಧಾರಕ್ಕೆ ಸಹಕರಿಸುವುದಲ್ಲದೆ ಬಹುಮುಖ್ಯವಾಗಿ ಅವುಗಳನ್ನು ಕಾಗದ ರಹಿತವಾಗುವಂತೆ ಮಾಡಲಿದೆ ಎಂದು ತಿಳಿಸಿದರು.

Dr. Selvamani  ಈ ಸಂದರ್ಭದಲ್ಲಿ ಸಮುದಾಯ ಸಂಪರ್ಕಾಧಿಕಾರಿ ಮೋಹನ್‌ಕುಮಾರ್, ಇ-ಆಫೀಸ್ ಸಂಪರ್ಕಾಧಿಕಾರಿ ಅನೂಪ್, ಜಿಲ್ಲಾ ನೋಡಲ್ ಅಧಿಕಾರಿ ಸುದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...