Monday, February 2, 2026
Monday, February 2, 2026

Kargil Vijay Diwas ಸೈನಿಕರೇ ನಮ್ಮ ನಿಜವಾದ ನಾಯಕರು-ಹರೀಶ್

Date:

Kargil Vijay Diwas ನಿಜವಾದ ನಾಯಕರು ಎಂದರೆ ನಮ್ಮ ಸೈನಿಕರು. ಇವರ ತ್ಯಾಗ ಬಲಿದಾನಗಳನ್ನು ನಮ್ಮ ಯುವ ಜನತೆ ಮರೆತು ಮರೆತು ಆಧುನಿಕತೆಯಲ್ಲಿ ಮರೆಯಾಗುತ್ತಿದ್ದಾರೆ ಎಂದು ಯೂಥ್ ಫಾರ್ ಸೇವಾದ ಸಂಯೋಜಕ ಹರೀಶ್ ಹೇಳಿದರು.

ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಸಿ ಸಿ ಘಟಕ ಮತ್ತು ಸಮಾಜಕಾರ್ಯ ವಿಭಾಗ ಹಾಗೂ ಯೂಥ್ ಫಾರ್ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಯೋಧ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸೈನಿಕ ಸಂಘದ ಅಧ್ಯಕ್ಷರಾದ ಶಂಕರ್ ಮಾತನಾಡಿ ಸೇನೆ ಅಂದರೆ ಭಯ ಅಲ್ಲ, ಅದೊಂದು ತುಂಬಾ ಗೌರವದ ಸೇವೆ ಎಂದು ಹೇಳಿದರು. ಸೇನೆಯಲ್ಲಿ ಸೇವೆ ಮಾಡಲು ಪುಣ್ಯ ಮಾಡಿರಬೇಕು, ಕಷ್ಟ ಪಟ್ಟು ಸೇವೆ ಮಾಡುವುದಲ್ಲ ಇಷ್ಟ ಪಟ್ಟು ಸೇವೆ ಮಾಡಿದರೆ ದೇಶದ ಗಡಿಯಿಂದ ಜೀವನಕ್ಕೆ ಬರಲು ಆಸಕ್ತಿಯೇ ಬರುವುದಿಲ್ಲ ಎಂದು ಮಾಜಿ ಯೋಧ ಶಾಂತಮೂರ್ತಿ ಹೇಳಿದರು.

ಪ್ರಾಂಶುಪಾಲರಾದ ಶೇಖರ್ ಮಾತನಾಡಿ ದೇಶದ ಯುವ ಶಕ್ತಿ ಸೇನೆಯಲ್ಲಿ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Kargil Vijay Diwas ಈ ಕಾರ್ಯಕ್ರಮದಲ್ಲಿ ಯೂಥ್ ಫಾರ್ ಸೇವಾದ ಕಾರ್ಯಕರ್ತರು, ಕಾಲೇಜಿನ ಬೋಧಕ ವರ್ಗ ಮತ್ತು ಬೋಧಕೇತರ ವರ್ಗ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...