Thursday, March 19, 2026
Thursday, March 19, 2026

Kargil Vijay Diwas ಸೈನಿಕರೇ ನಮ್ಮ ನಿಜವಾದ ನಾಯಕರು-ಹರೀಶ್

Date:

Kargil Vijay Diwas ನಿಜವಾದ ನಾಯಕರು ಎಂದರೆ ನಮ್ಮ ಸೈನಿಕರು. ಇವರ ತ್ಯಾಗ ಬಲಿದಾನಗಳನ್ನು ನಮ್ಮ ಯುವ ಜನತೆ ಮರೆತು ಮರೆತು ಆಧುನಿಕತೆಯಲ್ಲಿ ಮರೆಯಾಗುತ್ತಿದ್ದಾರೆ ಎಂದು ಯೂಥ್ ಫಾರ್ ಸೇವಾದ ಸಂಯೋಜಕ ಹರೀಶ್ ಹೇಳಿದರು.

ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಸಿ ಸಿ ಘಟಕ ಮತ್ತು ಸಮಾಜಕಾರ್ಯ ವಿಭಾಗ ಹಾಗೂ ಯೂಥ್ ಫಾರ್ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಯೋಧ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸೈನಿಕ ಸಂಘದ ಅಧ್ಯಕ್ಷರಾದ ಶಂಕರ್ ಮಾತನಾಡಿ ಸೇನೆ ಅಂದರೆ ಭಯ ಅಲ್ಲ, ಅದೊಂದು ತುಂಬಾ ಗೌರವದ ಸೇವೆ ಎಂದು ಹೇಳಿದರು. ಸೇನೆಯಲ್ಲಿ ಸೇವೆ ಮಾಡಲು ಪುಣ್ಯ ಮಾಡಿರಬೇಕು, ಕಷ್ಟ ಪಟ್ಟು ಸೇವೆ ಮಾಡುವುದಲ್ಲ ಇಷ್ಟ ಪಟ್ಟು ಸೇವೆ ಮಾಡಿದರೆ ದೇಶದ ಗಡಿಯಿಂದ ಜೀವನಕ್ಕೆ ಬರಲು ಆಸಕ್ತಿಯೇ ಬರುವುದಿಲ್ಲ ಎಂದು ಮಾಜಿ ಯೋಧ ಶಾಂತಮೂರ್ತಿ ಹೇಳಿದರು.

ಪ್ರಾಂಶುಪಾಲರಾದ ಶೇಖರ್ ಮಾತನಾಡಿ ದೇಶದ ಯುವ ಶಕ್ತಿ ಸೇನೆಯಲ್ಲಿ ಸೇವೆ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Kargil Vijay Diwas ಈ ಕಾರ್ಯಕ್ರಮದಲ್ಲಿ ಯೂಥ್ ಫಾರ್ ಸೇವಾದ ಕಾರ್ಯಕರ್ತರು, ಕಾಲೇಜಿನ ಬೋಧಕ ವರ್ಗ ಮತ್ತು ಬೋಧಕೇತರ ವರ್ಗ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...