Thursday, March 19, 2026
Thursday, March 19, 2026

Rotary Club Shivamogga ಟಿಸಿಎಚ್ ಓದಿ ಕೆಲಸ ಸಿಗದೇ ಬಸ್ ಏಜೆಂಟ್ ಆಗಿದ್ದೆ- ನಿವೃತ್ತ ಶಿಕ್ಷಕ ಬಸವರಾಜ್

Date:

Rotary Club Shivamogga ರೋಟರಿ ಪೂರ್ವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತರಾದ ಶಿಕ್ಷಕ ಶ್ರೀ ಬಸವರಾಜ್ .ಸಿ ಇವರಿಗೆ ಬೀಳ್ಕೊಡುಗೆ

ಶಿಕ್ಷಕರ ತರಬೇತಿ ಪರೀಕ್ಷೆಯಲ್ಲಿ ಉತ್ತೀರ್ಣನಾದ ನಂತರ ಸರ್ಕಾರಿ ಉದ್ಯೋಗ ದೊರೆಯದೇ, ಬಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ತನಗೆ ರೋಟರಿ ಪೂರ್ವ ವಿದ್ಯಾ ಸಂಸ್ಥೆಯವರು ಶಿಕ್ಷಕರ ಕೆಲಸ ನೀಡಿ ನನ್ನ ಜೀವನಕ್ಕೆ ಒಂದು ದಿಕ್ಕನ್ನು ತೋರಿಸಿ ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಹತ್‌ಕಾರ್ಯವನ್ನು ಮಾಡಲು ಅವಕಾಶ ದೊರಕಿಸಿಕೊಟ್ಟರು ಎಂದು, ಇಂದು ಸೇವೆಯಿಂದ ವಯೋನಿವೃತ್ತಿ ಹೊಂದಿದ ಶಿಕ್ಷಕ ಶ್ರೀ ಬಸವರಾಜ್ ಸಿ., ಇವರು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ (ರಿ.,), ರೋಟರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳು ಏರ್ಪಡಿಸಿದ ಹೃದಯಸ್ಪರ್ಶಿ ಬೀಳ್ಕೊಡುಗೆ ಸಮಾರಂಭದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ, ಸನ್ಮಾನ ಸ್ವೀಕರಿಸಿ ತಮ್ಮ ಅನಿಸಿಕೆಯನ್ನು ತಿಳಿಸಿದರು.


ಈ ಸಮಾರಂಭಕ್ಕೆ ರೋಟರಿ ಪೂರ್ವದ ಹಾಗೂ ಟ್ರಸ್ಟ್ನ ಪದಾಧಿಕಾರಿಗಳು ಉಭಯ ಶಾಲೆಗಳ ಶಿಕ್ಷಕ ಬಂಧು ಭಗಿನೀಯರು ಮಾತ್ರವಲ್ಲದೆ ಅವರ ಜೊತೆ ಕೆಲಸ ಮಾಡಿ ನಿವೃತ್ತರಾದ ಅನೇಕ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಪಾಲ್ಗೊಂಡು ಅನೇಕರು ಶ್ರೀಯುತರ ವ್ಯಕ್ತಿತ್ವದ ವಿವಿಧ ಆಯಾಮಗಳ ಪ್ರಶಂಶಿಸಿದರು.
Rotary Club Shivamogga ಸಮಾರAಭದ ಅಧ್ಯಕ್ಷತೆಯನ್ನು ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ರೊ. ಚಂದ್ರಶೇಖರಯ್ಯ ಎಂ., ನಿವೃತ್ತ ಡಿ.ಪಿ.ಐ. ಇವರು ವಹಿಸಿದ್ದು, ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಯಾವುದೇ ಒಂದು ಜನಾಂಗದ ಶಿಕ್ಷಣದ ಗುಣಮಟ್ಟವು ಆಯಾ ಕಾಲಘಟ್ಟದ ಶಿಕ್ಷಕರ ಶಿಕ್ಷಣದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ ಎಂದರು.
ಸಮಾರAಭದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ರೊ. ಸತೀಶ್‌ಚಂದ್ರ, ಕಾರ್ಯದರ್ಶಿ ರೊ. ಕಿಶೋರ್ ಕುಮಾರ್, ಟ್ರಸ್ಟ್ನ ಕಾರ್ಯದರ್ಶಿ ರೊ. ರಾಮಚಂದ್ರ ಎಸ್.ಸಿ., ಖಜಾಂಚಿ ರೊ. ವಿಜಯ್ ಕುಮಾರ್ ಜಿ., ಜಂಟಿ ಕಾರ್ಯದರ್ಶಿ ರೊ. ನಾಗವೇಣಿ ಎಸ್.ಆರ್., ಬೋರ್ಡ್ ಆಫ್ ಟ್ರಸ್ಟಿ ರೊ. ರವಿಶಂಕರ್ ಕೆ.ಬಿ., ಪ್ರಾಂಶುಪಾಲ ಶ್ರೀ ಸೂರ್ಯನಾರಾಯಣ್ ಆರ್., ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶೀಲಾ ಬಾಯಿ ಎಸ್. ಹಾಗೂ ಶಿಕ್ಷಕವೃಂದ & ಸಿಬ್ಬಂಧಿವರ್ಗದವರು ಪಾಲ್ಗೊಂಡು ಶ್ರೀಯುತರ ಗುಣಗಾನ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...