Tuesday, December 16, 2025
Tuesday, December 16, 2025

40-ವರ್ಷ ದಾಟಿದವರಿಗೆ ಬೂಸ್ಟರ್ ಡೋಸ್ ಸಲಹೆ

Date:

ಓಮಿಕ್ರಾನ್ ರೂಪಾಂತರಿ ಭಾರತಕ್ಕೆ ಕಾಲಿಟ್ಟ ಬೆನ್ನಲ್ಲೇ 40 ವರ್ಷ ದಾಟಿದವರಿಗೆ ಕೊರೊನಾ ಲಸಿಕೆಯ ಬೂಸ್ಟರ್ ನೀಡುವುದು ಉತ್ತಮ ಎಂದು ಜಿನೋಮ್ ಸೀಕ್ವನ್ಸಿಂಗ್ ತಜ್ಞರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕೊರೊನಾದ ಡೆಲ್ಟಾ ರೂಪಾಂತರಿ ವಿರುದ್ಧ ದೇಶಗಳು ಕೈಗೊಂಡ ಕ್ರಮಗಳೇ ಒಮಿಕ್ರಾನ್ ವಿರುದ್ಧವೂ ತೆಗೆದುಕೊಳ್ಳಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಒಮಿಕ್ರಾನ್ ಪ್ರಸರಣದಿಂದಾಗಿ ಜಗತ್ತಿನಾದ್ಯಂತ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದ್ದು, ರೂಪಾಂತರಿ ಹೊಸದಾಗಿದ್ದರೂ, ಹೋರಾಟದ ಮಾದರಿ ಅದೇ ಇರಲಿದೆ ಎಂದಿದೆ.
ಎಲ್ಲರಿಗೂ ಲಸಿಕೆ ವಿತರಿಸುವುದು, ಜನ ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧಾರಣೆ, ಆಸ್ಪತ್ರೆಗಳಲ್ಲಿ ಕೃತಕ ಆಮ್ಲಜನಕ ಸೌಲಭ್ಯ, ಐಸಿಯು ಹಾಸಿಗೆಗಳ ಹೆಚ್ಚಳ ಸೇರಿ ಡೆಲ್ಟಾ ವಿರುದ್ಧ ಕೈಗೊಂಡ ಕ್ರಮಗಳನ್ನು ಮುಂದುವರಿಸುವುದು ಉತ್ತಮ ಎಂದು ಡಬ್ಲ್ಯೂ ಎಚ್ಒ ಪಶ್ಚಿಮ ಪೆಸಿಫಿಕ್ ನ ಪ್ರಾದೇಶಿಕ ನಿರ್ದೇಶಕ ಡಾ.ಟಕೇಶಿ ಕಸಾಯಿ ತಿಳಿಸಿದ್ದಾರೆ.
ಅನಾರೋಗ್ಯಕ್ಕೀಡಾದವರು, ಹಿರಿಯ ನಾಗರಿಕರು ಸೇರಿದಂತೆ ದೇಶದಲ್ಲಿ ಲಸಿಕೆ ಪಡೆಯದವರಿಗೆ ಕ್ಷಿಪ್ರವಾಗಿ ಲಸಿಕೆ ನೀಡಬೇಕು. ಎರಡನೇ ಡೋಸ್ ಪಡೆಯದೇ ಇರುವವರಿಗೂ ಲಸಿಕೆ ನೀಡುವತ್ತ ಗಮನ ಹರಿಸಬೇಕು. ಹಾಗೆಯೇ, 40 ವರ್ಷ ದಾಟಿದವರಿಗೆ ಬೋಸ್ಟರ್ ಡೋಸ್ ನೀಡುವ ಕುರಿತು ಚಿಂತನೆ ನಡೆಸಬೇಕು. ಅವರಿಗೆ ಬೂಸ್ಟರ್ ಡೋಸ್ ನೀಡುವುದೇ ಒಳ್ಳೇದು ಎಂದು ಭಾರತೀಯ ಸಾರ್ಸ್ -ಸಿಒವಿ-2 ಜಿನೋಮಿಕ್ಸ್ ಸೀಕ್ವೆನ್ಸಿಂಗ್ ಕ್ಯಾನ್ಸೋರ್ಷ್ಯಯಂ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...