Monday, February 2, 2026
Monday, February 2, 2026

DSS Chikkamagalur ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿದರೆ ಸಹಕಾರವಿದೆ- ಸುಬ್ರಹ್ಮಣ್ಯ

Date:

DSS Chikkamagalur ನ.ರಾ.ಪುರ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಪುನರ್ ರಚನೆ ಹಾಗೂ ಕಾರ್ಯಕರ್ತರ ಸಭೆಯನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿ.ಪಂ. ಮಾಜಿ ಸದಸ್ಯ ಸುಬ್ರಹ್ಮಣ್ಯ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ ದಸಂಸವು 70ರ ದಶಕದಲ್ಲಿ ಬಿ.ಕೃಷ್ಟ್ಣಪ್ಪ ಸ್ಥಾಪಿಸಿದ ಸಂಘಟನೆಯಾಗಿದ್ದು ಈ ಸಮಿತಿಗೆ ಸಂವಿಧಾನ ಸಿದ್ದಾಂತವಿದೆ.

ಪತ್ರಿಕಾಗೋಷ್ಠಿಗೆ ಸೀಮಿತವಾದ ಸಂಘಟನೆಯಲ್ಲ. ರಾಜ್ಯದ ನಾಯಕ ಮಾವಳ್ಳಿ ಶಂಕರ್ ನೇತೃತ್ವದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಘಟಿಸಲಾಗುತ್ತಿದೆ ಎಂದಿದ್ದಾರೆ.

DSS Chikkamagalur ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಬ್ರಹ್ಮಣ್ಯ ತಾಲ್ಲೂಕಿನಲ್ಲಿ ಹಲವಾರು ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ದಸಂಸ ಹಲವಾರು ಸಂಕಷ್ಟಗಳ ನಡುವೆ ಅತ್ಯಂತ ಚುರುಕಿನಿಂದ ಜನಪರವಾದ ಕೆಲಸ ಮಾಡುತ್ತಿದ್ದು ಪ್ರತಿಯೊಬ್ಬರು ಒಗ್ಗಟ್ಟಾಗಿ ಹೋರಾಟ ರೂಪಿಸಿದರೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಮಹೇಂದ್ರ, ತರೀಕೆರೆ ತಾಲ್ಲೂಕಿನ ಸಂಚಾಲ ಕರಾದ ರಾಮಚಂದ್ರ, ಮೌಂಟ್, ಸುಂದರೇಶ್, ಭೀಮ್ ಆರ್ಮಿ ನಾಗರಾಜ್ ಭಾಗವಹಿಸಿದ್ದರು
ಬಳಿಕ ನೂತನ ಸಮಿತಿಗೆ ಸಂಚಾಲಕರಾಗಿ ವಸಂತಕುಮಾರ್, ಅಂಬೇಡ್ಕರ್ ನಗರ ಸಂಘಟನಾ ಸಂಚಾಲಕ ಉಮೇಶ್ ಕೆ.ಕಣಬೂರು, ಮಹೇಶ್ ಭೈರಾಪುರ, ಬಾಬು ಅವರನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...