Thursday, March 13, 2025
Thursday, March 13, 2025

ರಾಜ್ಯದ ಹಲವೆಡೆ ಮಳೆ : ರೈತರಿಗೆ ಬೆಳೆ ಸಂಕಷ್ಟ

Date:

ರಾಜ್ಯದ ಹಲವೆಡೆ ಶುಕ್ರವಾರ ಚಿಕ್ಕಮಗಳೂರು, ಮೈಸೂರು ಜಿಲ್ಲೆ ಸೇರಿದಂತೆ ಬಯಲುಸೀಮೆಯಲ್ಲಿ ಧಾರಾಕಾರ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯ ದಂದೂರು, ಕಡೂರು, ಬೀರೂರು ಭಾಗದಲ್ಲಿ ಸುರಿದಂತಹ ಮಳೆಯಿಂದಾಗಿ ಬೆಳೆ ಹಾನಿ ಉಂಟಾಗಿದೆ.

ಈ ಭಾಗಗಳಲ್ಲಿ ಬೆಳೆದಿದ್ದ ಮೆಕ್ಕೆಜೋಳ ರಾಗಿ ಬೆಳೆ ನೆಲಕಚ್ಚಿವೆ. ಅಡಿಕೆ, ತೆಂಗಿನ ತೋಟಗಳಲ್ಲಿ ನೀರು ನಿಂತಿದೆ. ಮಳೆಯಿಂದಾಗಿ ಶಿವನಿ ಕೆರೆ ಇರುವ ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನಗಳ ಸಂಚಾರಕ್ಕೆ ತೊಂದರೆಉಂಟಾಗಿದೆ.

ರಾಮಗಿರಿ, ಗಂಗಸಮುದ್ರ ಕಣವಿ ಹಳ್ಳಿ ಸಿಂಗೇನಹಳ್ಳಿ ಸುತ್ತ -ಮುತ್ತ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದಿದೆ.

ಮೈಸೂರು, ಕೊಡಗು ಮಂಡ್ಯ ಹಾಸನ ಜಿಲ್ಲೆಗಳಲ್ಲೂ ಕೂಡ ಗುಡುಗು ಸಹಿತ ಸುರಿದಂತಹ ವಿಪರೀತ ಮಳೆಯಿಂದಾಗಿ ಕೊಯ್ಲು ಮಾಡಿದ ಭತ್ತ ಕೊಯ್ದು ಹೋಗಿದೆ.

ಅಕಾಲಿಕ ಮಳೆಯು ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...