Monday, August 3, 2026
Monday, August 3, 2026

Kateel Ashok Pai Memorial College ವಿದ್ಯಾರ್ಥಿಗಳಿಗೆ ಔದ್ಯೋಗಿಕ ಪೂರ್ವ ತಯಾರಿ ಕಾರ್ಯ ಕ್ರಮ

Date:

Kateel Ashok Pai Memorial College ಶಿವಮೊಗ್ಗದ ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ‘ದಿಶಾ’ ಕೆರಿಯರ್ ಗೈಡೆನ್ಸ್ & ಪ್ಲೇಸ್‌ಮೆಂಟ್ ಸೆಲ್ ಹಾಗೂ ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ನ ಸಹಯೋಗದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಎಂ.ಎಸ್ಸಿ ಸೈಕಾಲಜಿ ವಿದ್ಯಾರ್ಥಿಗಳಿಗೆ ಪ್ರಿ ಪ್ಲೇಸ್‌ಮೆಂಟ್ ಟ್ರೈನಿಂಗ್ (ಔದ್ಯೋಗಿಕ ಪೂರ್ವತಯಾರಿ) ಕಾರ್ಯಕ್ರಮವನ್ನು ಆಗಸ್ಟ್ 05 & 06 ರಂದು ಛೇಂಬರ್ ಆಫ್ ಕಾಮರ್ಸ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಎರಡು ದಿನಗಳ ತರಬೇತಿಯನ್ನು ಬೆಂಗಳೂರಿನ ನುರಿತ ತರಬೇತುದಾರರಾದ ಶ್ರೀ ವೇದಮೂರ್ತಿಯವರು ನಡೆಸಿಕೊಡಲಿದ್ದಾರೆ. ಈ ತರಬೇತಿಯ ಉದ್ಘಾಟನೆಯನ್ನು ನಮ್ಮ ಹೆಮ್ಮೆಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ರವರು ನಡೆಸಿಕೊಡಲಿದ್ದಾರೆ.

Kateel Ashok Pai Memorial College ಡಾ.ರಜನಿ ಎ ಪೈ, ಡಾ.ರಾಜೇಂದ್ರ ಚೆನ್ನಿ, ಛೇಂಬರ್ ಆಫ್ ಕಾಮರ್ಸ್ನ ಶ್ರೀ ಗೋಪಿನಾಥ್, ಶ್ರೀಮತಿ ಸವಿತಾ ಮಾಧವ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಕೆ ಈ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವರು.

ಈ ಉದ್ಘಾಟನಾ ಸಮಾರಂಭವು ದಿನಾಂಕ 05/08/2023 ರಂದು ಬೆಳಿಗ್ಗೆ 09:30 ಕ್ಕೆ ಸರಿಯಾಗಿ ಛೇಂಬರ್ ಆಫ್ ಕಾಮರ್ಸ್ ಹಾಲ್‌ನಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...