Thursday, July 9, 2026
Thursday, July 9, 2026

ದೇಶದಲ್ಲಿ ಸಂತಾನೋತ್ಪತ್ತಿ ಕುಸಿತ

Date:

ದೇಶದಲ್ಲಿ ಸಂತಾನ ಉತ್ಪತ್ತಿ ಫಲವಂತಿಕೆ ಕುಸಿಯುತ್ತಿರುವುದಕ್ಕೆ ಗರ್ಭನಿರೋಧಕಗಳ ಬಳಕೆ ಯಲ್ಲಿ ಹೆಚ್ಚಳ ಕಾರಣ ಎಂದು ಕೇಂದ್ರ ಸರ್ಕಾರದ ಸಮೀಕ್ಷೆಯಿಂದ ತಿಳಿದುಬಂದಿದೆ.
ವಲಸೆ ಕಾರ್ಮಿಕರು ಹೆಚ್ಚಿರುವ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಗಮನಹರಿಸಿ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗುತ್ತಿದ್ದೇವೆ. ಹೆಣ್ಣು ಮಕ್ಕಳಿಗೆ ಈ ನಿಟ್ಟಿನಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಜನಸಂಖ್ಯೆ ಸ್ಪೋಟ ತಡೆಯಲು ಇದು ಸಹಕಾರಿ ಎಂದು ಅಂತರಾಷ್ಟ್ರೀಯ ಜನಸಂಖ್ಯಾ ವಿಜ್ಞಾನಗಳ ಕೇಂದ್ರದ ನಿರ್ದೇಶಕರಾದ ಪ್ರೊ.ಕೆ.ಜೇಮ್ಸ್ , ಅವರು ತಿಳಿಸಿದ್ದಾರೆ.
5ನೇ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಫಲವಂತಿಕೆ ಕುಸಿಯುತ್ತಿರುವ ಸಂಗತಿಯನ್ನು ಬಯಲು ಮಾಡಿತ್ತು.ಅದೇ ಸಮೀಕ್ಷೆಯು, ಫಲವಂತಿಕೆ ಕ್ಷೀಣಿಸಲು ಗರ್ಭನಿರೋಧಕಗಳ ಬಳಕೆ ಹೆಚ್ಚಳವೇ ಕಾರಣ ಎಂಬುದನ್ನೂ ಪತ್ತೆ ಮಾಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ದೇಶದಲ್ಲಿ ಗರ್ಭನಿರೋಧಕ (ಮಾತ್ರೆ ಮತ್ತು ಸಾಧನ) ಬಳಕೆ ಶೇ.8.7ರಷ್ಟು ಜಾಸ್ತಿಯಾಗಿದೆ. ಐದು ವರ್ಷಗಳ ಮುನ್ನ ಶೇ.47.8ರಷ್ಟು ಜನರು ಗರ್ಭನಿರೋಧಕಗಳನ್ನು ಬಳಸುತ್ತಿದ್ದರೆ, ಈಗ ಪ್ರಮಾಣ ಶೇಕ.56.5ಕ್ಕೆ ಏರಿಕೆಯಾಗಿದೆ. ಅಂದರೆ ಚಿಕ್ಕ-ಚೊಕ್ಕ ಕುಟುಂಬದತ್ತ ಆಸಕ್ತಿ ತೋರಿಸುತ್ತಿರುವ ಭಾರತೀಯರು, ಹೆಚ್ಚೆಂದರೆ ಎರಡು ಮಕ್ಕಳನ್ನು ಮಾತ್ರ ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಸಮಾಜದಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆಗಳು ಕೂಡ ಇದಕ್ಕೆ ಕಾರಣ ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...